ಬೀದಿ ನಾಯಿ ಪರ ಟ್ವೀಟ್ ಮಾಡಿದ ಸಿದ್ದರಾಮಯ್ಯ: ಇದಕ್ಕೇನಾ ಬಿರಿಯಾನಿ ಕೊಡ್ತಿರೋದು ಎಂದ ನೆಟ್ಟಿಗರು

Krishnaveni K
ಮಂಗಳವಾರ, 12 ಆಗಸ್ಟ್ 2025 (17:59 IST)
ಬೆಂಗಳೂರು: ದೆಹಲಿಯಲ್ಲಿ ಬೀದಿ ನಾಯಿಗಳನ್ನು ಹುಡುಕಿ ಎತ್ತಂಗಡಿ ಮಾಡುವಂತೆ ಸುಪ್ರೀಂಕೋರ್ಟ್ ನೀಡಿದ ಆದೇಶ ಈಗ ಚರ್ಚೆಗೆ ಕಾರಣವಾಗಿದೆ. ಬೀದಿ ನಾಯಿಗಳ ಪರವಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು ಇದಕ್ಕೆ ನೆಟ್ಟಿಗರು ಕಾಮೆಂಟ್ ಮಾಡಿ ಇದಕ್ಕೇನಾ ಬಿರಿಯಾನಿ ಕೊಡ್ತಿರೋದು ಎಂದು ಕಾಲೆಳೆದಿದ್ದಾರೆ.

ದೆಹಲಿಯಲ್ಲಿ ಬೀದಿ ನಾಯಿಗಳ ಕಡಿತ ಪ್ರಕರಣಗಳು ಹೆಚ್ಚಾಗಿರುವ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್ ಎಲ್ಲಾ ಬೀದಿ ನಾಯಿಗಳನ್ನೂ ಆಶ್ರಯ ಕೇಂದ್ರಗಳಿಗೆ ಸಾಗಿಸುವಂತೆ ಆದೇಶ ನೀಡಿದೆ. ಈ ಬಗ್ಗೆ ಪ್ರಾಣಿಪ್ರಿಯರು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.

ಸಂಸದೆ ಪ್ರಿಯಾಂಕ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡಾ ಬೀದಿ ನಾಯಿಗಳ ವಿರುದ್ಧ ಸುಪ್ರೀಂಕೋರ್ಟ್ ನಿರ್ಧಾರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಕೂಡಾ ರಾಹುಲ್ ಟ್ವೀಟ್ ರಿಟ್ವೀಟ್ ಮಾಡಿದ್ದು, ಬೀದಿ ನಾಯಿಗಳನ್ನು ಎತ್ತಂಗಡಿ ಮಾಡುವುದು ಕ್ರೌರ್ಯ. ಅವುಗಳನ್ನು ಕರುಣೆಯಿಂದ ನೋಡಬೇಕು. ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ, ವ್ಯಾಕ್ಸಿನೇಷನ್ ನೀಡುವ ಮೂಲಕ ಅವುಗಳಿಂದ ಮನುಷ್ಯರಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್ ಗೆ ನೆಟ್ಟಿಗರು ಸ್ವಾರಸ್ಯಕರವಾಗಿ ಕಾಮೆಂಟ್ ಮಾಡಿದ್ದಾರೆ. ಇತ್ತೀಚೆಗೆ ಬಿಬಿಎಂಪಿ ಬೆಂಗಳೂರಿನ ಬೀದಿ ನಾಯಿಗಳಿಗೆ ಬಿರಿಯಾನಿ ಕೊಡಲು ತೀರ್ಮಾನಿಸಿತ್ತು. ಅದನ್ನೇ ಮುಂದಿಟ್ಟುಕೊಂಡು ಈಗ ನೆಟ್ಟಿಗರು ಸಿದ್ದರಾಮಯ್ಯ ಕಾಲೆಳೆದಿದ್ದಾರೆ. ಬಾಸ್ ಅದಕ್ಕೇನಾ ಬೆಂಗಳೂರಿನ ಬೀದಿ ನಾಯಿಗಳಿಗೆ ಬಿರಿಯಾನಿ ಕೊಡ್ತಿರೋದು ಎಂದಿದ್ದಾರೆ. ಇನ್ನು ಕೆಲವರು ನೀವೇನೋ ಕಾರಿನಲ್ಲಿ ಭದ್ರತೆಯಲ್ಲಿ ಓಡಾಡ್ತೀರಿ. ಆದರೆ ಬೀದಿಯಲ್ಲಿ ಓಡಾಡುವ ಸಾಮಾನ್ಯ ಜನರ ಪಾಡೇನು ಎಂದು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments