Publish Date: Fri, 16 Feb 2018 (07:17 IST)
Updated Date: Fri, 16 Feb 2018 (07:22 IST)
ನವದೆಹಲಿ : ಕೇಂದ್ರ ಸರ್ಕಾರ ವಾಯು ಮಾಲಿನ್ಯವನ್ನು ನಿಯಂತ್ರಿಸುವ ಉದ್ದೇಶದಿಂದ ಹೊಸ ಕಾಯಿದೆಯನ್ನು ಜಾರಿಗೆ ತರಲು ಮುಂದಾಗಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ’15 ವರ್ಷಕ್ಕಿಂತ ಹಳೆಯ ವಾಹನಗಳ ಸಂಚಾರವನ್ನು ನಿಷೇಧ ಮಾಡಿದರೆ ದೇಶದಲ್ಲಿ ಹೆಚ್ಚಾಗುತ್ತಿರುವ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಹಾಯವಾಗಲಿದೆ’ ಎಂದು ಹೇಳಿದ್ದಾರೆ.
ಹಾಗೆ ಅವರು ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಹೊಸ ರಸ್ತೆ ಸಾರಿಗೆಯಲ್ಲಿರುವ ವಿಷಯಗಳ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ