Webdunia - Bharat's app for daily news and videos

Install App

ನವದೆಹಲಿ: ಡಿವೋರ್ಸ್‌, ವ್ಯವಹಾರದಲ್ಲಿ ಕಲಹಕ್ಕೆ ಭೇಸತ್ತು ಉದ್ಯಮಿ ಆತ್ಮಹತ್ಯೆ

Sampriya
ಬುಧವಾರ, 1 ಜನವರಿ 2025 (16:45 IST)
ನವದೆಹಲಿ: ಡಿವೋರ್ಸ್‌ ಬೆನ್ನಲ್ಲೇ ಮಾಜಿ ಪತ್ನಿ ಜತೆಗಿನ ವ್ಯವಹಾರದ ವಿಚಾರವಾಗಿ ನಡೆದ ಕಲಹದಿಂದಾಗಿ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ದೆಹಲಿಯಲ್ಲಿ ನಡೆದಿದೆ. ಇಲ್ಲಿನ ಉದ್ಯಮಿಯೊಬ್ಬರು ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಿದ್ದಾರೆ.

ಖುರಾನಾ ಮತ್ತು ಅವರ ಪತ್ನಿ ಮಾಣಿಕಾ ಜಗದೀಶ್ ಪಹ್ವಾ ಜೊತೆಗಿನ ವಿಚ್ಛೇದನ ಹಾಗೂ ಕೆಫೆ ವ್ಯವಹಾರಕ್ಕೆ ಸಂಬಂಧಿಸಿದ ಗಲಾಟೆ ನಡುವೆಯೇ ಈ ಘಟನೆ ನಡೆದಿದೆ.

ರಾಷ್ಟ್ರ ರಾಜಧಾನಿಯಲ್ಲಿ ವುಡ್‌ಬಾಕ್ಸ್ ಕೆಫೆ ಹೊಂದಿದ್ದ ದಂಪತಿ ಜಂಟಿಯಾಗಿ ವ್ಯವಹಾರ ನಡೆಸುತ್ತಿದ್ದರು. ಇಬ್ಬರ ನಡುವೆ ವ್ಯವಹಾರದ ವಿಚಾರಕ್ಕೆ ಸಂಬಂಧಿಸಿದಂತೆ ಮನಸ್ತಾಪ ಏರ್ಪಟ್ಟಿತ್ತು. ಅಲ್ಲದೇ ದಾಂಪತ್ಯ ಜೀವನದಲ್ಲೂ ಕಲಹದಿಂದಾಗಿ ಈ ಜೋಡಿ ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದರು.

ಇವರಿಬ್ಬರು 2016ರಲ್ಲಿ ಮದುವೆಯಾಗಿದ್ದರು, ಪತ್ನಿ ಮೇಲೆ ಖುರಾನಾಗೆ ಅಸಮಾಧಾನ ಇತ್ತು ಎಂದು ಕುಟುಂಬಸ್ಥರು ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆಡಿಯೋದಲ್ಲಿ ನಾವಿಬ್ಬರೂ ಡಿವೋರ್ಸ್‌ ಪಡೆದುಕೊಳ್ಳೋಣ. ಆದ್ರೆ ವಿಚ್ಛೇದನದ ನಂತರವೂ ವ್ಯವಹಾರದಲ್ಲಿ ಪಾಲುದಾರಳಾಗಿರುತ್ತೇನೆ. ನೀವು ನನ್ನ ಬಾಕಿ ಸಾಲವನ್ನ ತೀರಿಸಬೇಕು ಎಂದು ಖುರಾನಾ ಪತ್ನಿ ಮನಿಕಾ ಹೇಳಿದ್ದಾರೆ. ಘಟನೆಯ ಬಳಿಕ ಪೊಲೀಸರು ಖುರಾನಾ ಪತ್ನಿಯ ಫೋನನ್ನು ವಶಕ್ಕೆ ಪಡೆದಿದ್ದು, ಆಕೆಯನ್ನು ವಿಚಾರಣೆಗೆ ಕರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ರಾಹುಲ್ ಗಾಂಧಿ ಮತಕಳ್ಳತನದ ಪ್ರತಿಭಟನೆ ಯಾವಾಗ ಡಿಕೆ ಶಿವಕುಮಾರ್ ಹೇಳಿದ್ದೇನು

ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments