Webdunia - Bharat's app for daily news and videos

Install App

ಅತ್ಯಂತ ಕಳಪೆ ಮಟ್ಟ ತಲುಪಿದ ನವದೆಹಲಿಯ ವಾಯು ಗುಣಮಟ್ಟ: ಹೆಚ್ಚಿದ ಆತಂಕ

Sampriya
ಗುರುವಾರ, 26 ಡಿಸೆಂಬರ್ 2024 (14:24 IST)
Photo Courtesy X
ನವದೆಹಲಿ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ (ಸಿಪಿಸಿಬಿ) ಅಂಕಿಅಂಶಗಳ ಪ್ರಕಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ(ಎಕ್ಯೂಐ) ಅತ್ಯಂತ ಕಳಪೆ ಮಟ್ಟದಲ್ಲಿದೆ. ಗುರುವಾರ ಬೆಳಿಗ್ಗೆ 9 ಗಂಟೆಗೆ ಎಕ್ಯೂಐ 340 ರಷ್ಟಿತ್ತು.

38 ನಿಗಾ ಕೇಂದ್ರಗಳ ಪೈಕಿ 32 ಕೇಂದ್ರಗಳಲ್ಲಿ ಎಕ್ಯೂಐ ಅತ್ಯಂತ ಕಳಪೆ ಹಂತದ ವ್ಯಾಪ್ತಿಯಲ್ಲಿದೆ ಎಂದು ಸಿಪಿಸಿಬಿ ಹೇಳಿದೆ.

ಎಕ್ಯೂಐ ಪ್ರಮಾಣ ಸೊನ್ನೆಯಿಂದ 50 ರಷ್ಟಿದ್ದರೆ 'ಉತ್ತಮ' ಎಂದು, 51ರಿಂದ 100 ರಷ್ಟಿದ್ದರೆ 'ಸಮಾಧಾನಕರ', 101 ರಿಂದ 200 ರಷ್ಟಿದ್ದರೆ 'ಸಾಧಾರಣ', 201 ರಿಂದ 300 ರಷ್ಟಿದ್ದರೆ 'ಕಳಪೆ' ಹಾಗೂ 301 ರಿಂದ 400 ರಷ್ಟಿದ್ದರೆ 'ಅತ್ಯಂತ ಕಳಪೆ' ಎಂದು ಹೇಳಲಾಗುತ್ತದೆ. 401ರಿಂದ 450ರಷ್ಟು ಕಂಡು ಬಂದರೆ 'ತೀವ್ರ ಕಳಪೆ' ಹಾಗೂ 450ಕ್ಕಿಂತ ಹೆಚ್ಚಾದರೆ 'ತೀವ್ರಕ್ಕಿಂತಲೂ ಅಪಾಯಕಾರಿ' ಎಂದು ಪರಿಗಣಿಸಲಾಗುತ್ತದೆ.

ಇನ್ನು ರಾಷ್ಟ್ರ ರಾಜಧಾನಿಯಲ್ಲಿ(ದೆಹಲಿ) ಶುಕ್ರವಾರ ಮತ್ತು ಶನಿವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಅಲ್ಲದೇ ಭಾನುವಾರ ಅತ್ಯಂತ ದಟ್ಟವಾದ ಮಂಜು ಆವರಿಸಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಕನಿಷ್ಠ ತಾಪಮಾನವು 8.2 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದೆ ಎಂದೂ ಐಎಂಡಿ ತಿಳಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments