Webdunia - Bharat's app for daily news and videos

Install App

ಚಿನ್ನಮ್ಮನಿಗೆ ಹೊಸ ಸಂಕಷ್ಟ

Webdunia
ಗುರುವಾರ, 2 ಫೆಬ್ರವರಿ 2017 (08:36 IST)
ವಿದೇಶಿ ವಿನಿಮಯ ಅಕ್ರಮಕ್ಕೆ ಸಂಬಂಧಿಸಿದಂತೆ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಪರಮಾಪ್ತೆ ಶಶಿಕಲಾ ನಟರಾಜನ್ ಮತ್ತು ಅವರ ಸಹೋದರ ಸಂಬಂಧಿ ಟಿಟಿವಿ ದಿನಕರನ್ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ವಜಾಗೊಳಿಸಲು ಮದ್ರಾಸ್ ಹೈಕೋರ್ಟ್ ಮಧುರೈ ಪೀಠ ನಿರಾಕರಿಸಿದೆ.
 

 
ದಿನಕರನ್, ಡಿಪ್ಪರ್ ಇನವೆಸ್ಟ್‌ಮೆಂಟ್ ಲಿಮಿಟೆಡ್ ಕಂಪನಿಗೆ 1 ಕೋಟಿ ಡಾಲರ್ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಜಾರಿ ನಿರ್ದೇಶನಾಲಯ ದೂರನ್ನು ದಾಖಲಿಸಿತ್ತು. ಈ ಹಣ ಶಶಿಕಲಾ ಗೆಳತಿ ಆರ್. ಸುಶೀಲಾ ಅವರ ಖಾತೆ ಮೂಲಕ ವರ್ಗಾವಣೆಯಾಗಿತ್ತು. ಬಳಿಕ ಬೇರೆ ವ್ಯಕ್ತಿಗೆ ಚೆಕ್ ಮೂಲಕ 25 ಕಂತುಗಳಲ್ಲಿ ಈ ಹಣವನ್ನು ಸಂದಾಯ ಮಾಡಲಾಗಿತ್ತು. ಈ ಹಣ ವರ್ಗಾವಣೆ ಪ್ರಕ್ರಿಯೆಯಲ್ಲಿ ವಿದೇಶಿ ವಿನಿಮಯ ನಿಯಮ ಉಲ್ಲಂಘನೆಯಾಗಿದೆ ಎಂಬುದು ಆರೋಪ. 
 
ಕೆಳ ಹಂತದ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಸೂಕ್ತ ಸಾಕ್ಷ್ಯಗಳ ಕೊರತೆಯಿಂದ 1996ರಲ್ಲಿ ಶಶಿಕಲಾ ಮತ್ತು ದಿನಕರನ್ ಆರೋಪ ಸಾಬೀತಾಗಿರಲಿಲ್ಲ. ಹೀಗಾಗಿ ಅವರಿಬ್ಬರು ಖುಲಾಸೆಯಾಗಿದ್ದು, ಈ ತೀರ್ಪನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಮೇಲೆ ಅಮೆರಿಕೆ ಏರ್‌ಸ್ಟ್ರೈಕ್‌‌: ಡೊನಾಲ್ಡ್ ಟ್ರಂಪ್ ಗಂಡೆದೆಯನ್ನು ಕೊಂಡಾಡಿದ ಇಸ್ರೇಲ್ ಪ್ರಧಾನಿ

ಪಹಲ್ಗಾಮ್‌ ದಾಳಿ: ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌

ಸ್ಟೇಟ್ ಸ್ಪಾನ್ಸರ್ ಕರಪ್ಷನ್‌ಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ಉತ್ತೇಜನ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ

ಸ್ನೇಹಿತರೊಂದಿಗೆ ತೋಟದ ಮನೆಗೆ ಪಾರ್ಟಿಗೆ ತೆರಳಿದ್ದ ಯುವಕರಿಬ್ಬರು ಕೃಷಿಹೊಂಡದಲ್ಲಿ ಜಲಸಮಾಧಿ

ಏರ್‌ಸ್ಟ್ರೈಕ್‌ಗೆ ಕ್ಯಾರೇ ಎನ್ನದ ಇರಾನ್‌: ಇಸ್ರೇಲ್‌ ಮೇಲೆ ಮಿಸೈಲ್‌ಗಳ ಸುರಿಮಳೆ, ಗಗನಚುಂಬಿ ಕಟ್ಟಡಗಳಿಗೆ ಹಾನಿ

ಮುಂದಿನ ಸುದ್ದಿ
Show comments