Webdunia - Bharat's app for daily news and videos

Install App

ಸುನಂದಾ ಪುಷ್ಕರ್ ಸಾವಿಗೆ ಹೊಸ ಟ್ವಿಸ್ಟ್!

Webdunia
ಮಂಗಳವಾರ, 9 ಮೇ 2017 (10:54 IST)
ನವದೆಹಲಿ: ಸಂಸದ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಅನುಮಾನಸ್ಪದ ಸಾವಿಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸುನಂದಾ ಸಾವಿನ ಬಗ್ಗೆ ಶಶಿ ತರೂರ್ ಗೆ ಗೊತ್ತಿತ್ತು ಎಂದು ಖಾಸಗಿ ವಾಹಿನಿಯೊಂದು ಆರೋಪಿಸಿದೆ.

 
ಸುನಂದಾ ಪುಷ್ಕರ್ ಸಾವಿಗೂ ಮೊದಲು ಕೆಲವು ರಹಸ್ಯಗಳನ್ನು ಹೊರಗೆಳೆಯಲು ಬಯಸಿದ್ದರು. ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿದ್ದ ಅವರು ಈ ಬಗ್ಗೆ ಅವರು ತಮ್ಮ ಆಪ್ತ ಪತ್ರಕರ್ತರಿಗೆ ಬೆಳಗಿನ ಜಾವ ಸಂದೇಶವನ್ನೂ ಕಳುಹಿಸಿದ್ದರು. ಆದರೆ ಅದಕ್ಕಿಂತ ಮೊದಲೇ ಅವರ ಕೊಲೆಯಾಗಿತ್ತು ಎಂದು ಟಿವಿ ವಾಹಿನಿ ವರದಿ ಮಾಡಿದೆ.

ಅಲ್ಲದೆ, ಸುನಂದಾ ಕೊಲೆಯಾಗಿದ್ದು, 307 ನೇ ನಂಬರ್ ಕೊಠಡಿಯಲ್ಲಿ ಮತ್ತು ಅವರ ದೇಹ ಸಿಕ್ಕಿದ್ದು 345 ನಂಬರ್ ಕೊಠಡಿಯಲ್ಲಿ. ಅವರ ದೇಹವನ್ನು ಒಂದು ಕೊಠಡಿಯಿಂದ ಇನ್ನೊಂದು ಕೊಠಡಿಗೆ ಸ್ಥಳಾಂತರಿಸಲಾಗಿತ್ತು ಎಂದು ವಾಹಿನಿ ಆರೋಪಿಸಿದೆ.

ತರೂರ್ ಅವರು ಪಾಕಿಸ್ತಾನಿ ಪತ್ರಕರ್ತೆ ಮೆಹರ್ ತರಾರ್ ಜತೆಗೆ ಸ್ನೇಹ ಸಂಬಂಧ ಹೊಂದಿದ್ದರು. ಇದೇ ಕಾರಣಕ್ಕೆ ಸಾಯುವ ಮೊದಲು ಸುನಂದಾ ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದರು ಎಂದು ವಾಹಿನಿ ವಿವರಿಸಿದೆ.

ಸುನಂದಾ ಕೊಲೆಯಾಗುವ ಮೊದಲು ತರೂರ್ ರೊಂದಿಗೆ ವಾಗ್ವಾದ ನಡೆದಿತ್ತು. ಹಾಗೂ ಪಾಕ್ ಪತ್ರಕರ್ತೆ ಮತ್ತು ತರೂರ್ ಸಹಾಯಕರ ನಡುವೆ 19 ಬಾರಿ ಫೋನ್ ಸಂಭಾಷಣೆ ನಡೆದಿತ್ತು ಎಂದು ವಾಹಿನಿ ವರದಿ ಮಾಡಿದೆ. ಅಲ್ಲದೆ ಸುನಂದಾ ಸಾಯುವಾಗ ಸಹಾಯಕ ಅದೇ ಹೋಟೆಲ್ ನಲ್ಲಿದ್ದ ಎಂದು ಅನುಮಾನ ವ್ಯಕ್ತಪಡಿಸಿದೆ.

2014 ರಲ್ಲಿ ಸುನಂದಾ ಅನುಮಾನಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದರು. ಆರಂಭದಲ್ಲಿ ಇದೊಂದು ಆತ್ಮಹತ್ಯೆ ಎನ್ನಲಾಗಿತ್ತು. ಆದರೆ ನಂತರ ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ದೇಹಕ್ಕೆ ವಿಷ ಇಂಜೆಕ್ಟ್ ಆಗಿತ್ತು ಎನ್ನುವುದು ಪತ್ತೆಯಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments