Webdunia - Bharat's app for daily news and videos

Install App

ವರದಕ್ಷಿಣೆ ಭೂತ: ನವವಿವಾಹಿತೆ ಕತ್ತು ಸೀಳಿ ಕೊಂದ ಮಾವ

Webdunia
ಭಾನುವಾರ, 13 ನವೆಂಬರ್ 2016 (15:53 IST)
ವರದಕ್ಷಿಣೆ ಭೂತ ಬಡಿದುಕೊಂಡಿದ್ದ ಪಾಪಿ ಮಾವನೊಬ್ಬ ತನ್ನ ಸೊಸೆಯನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ಘಟನೆ ಮುಜಾಪರ್ ನಗರದಲ್ಲಿ ನಡೆದಿದೆ. 
 
ಜಿಲ್ಲೆಯ ಸಿಕ್ರೇಡಾ ಗ್ರಾಮದಲ್ಲಿ  ಈ ಹೇಯ ಘಟನೆ ನಡೆದಿದ್ದು, ಆರೋಪಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. 
ಮೃತ ಸರಿತಾ ಶುಕ್ರವಾರದಿಂದ ನಾಪತ್ತೆಯಾಗಿದ್ದಾಳೆ ಎಂದು ಗ್ರಾಮಸ್ಥರು ದೂರು ನೀಡಿದ ಹಿನ್ನೆಲೆ ಪೊಲೀಸರು ತನಿಖೆ ನಡೆಸಿದಾಗ ಆಕೆ ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ.
 
ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ ಆತ ಆಕೆಯನ್ನು ಕೊಂದು ಚರಂಡಿಯೊಳಗೆ ಹಾಕಿರುವುದಾಗಿ ಬಾಯ್ಬಿಟ್ಟಿದ್ದಾನೆ.
 
ಮೃತಳ ಶವವನ್ನು ಪತ್ತೆ ಹಚ್ಚಿರುವ ಪೊಲೀಸರು ಅದನ್ನು ಮರಣೊತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ.
 
ಕಳೆದ ಎಪ್ರಿಲ್ ತಿಂಗಳಲ್ಲಿ ಆರೋಪಿಯ ಮಗ ರಾಜ್ ಕುಮಾರ್‌ನನ್ನು ವಿವಾಹವಾಗಿದ್ದ ಸರಿತಾ ಪತಿ ಸೇರಿದಂತೆ ಅತ್ತೆಮಾವಂದಿರಿಂದ ವರದಕ್ಷಿಣೆ ಹಿಂಸೆಯನ್ನು ಅನುಭವಿಸುತ್ತಿದ್ದಳು.
 
ಪತಿ ಸೇರಿದಂತೆ ಇತರ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments