Webdunia - Bharat's app for daily news and videos

Install App

ಮುಂದೆ ಇಂತಹ ಮೂರ್ಖ ಪ್ರಧಾನಿಯನ್ನು ಆಯ್ಕೆ ಮಾಡಬೇಡಿ: ಬಿಜೆಪಿ ಮುಖಂಡ

Webdunia
ಮಂಗಳವಾರ, 15 ನವೆಂಬರ್ 2016 (15:26 IST)
ಮುಂಬರುವ ಚುನಾವಣೆಗಳಲ್ಲಿ ಇಂತಹ ಮೂರ್ಖ ಪ್ರಧಾನಿಯನ್ನು ದೇಶದ ಜನತೆ ಮತ್ತೆ ಆಯ್ಕೆ ಮಾಡಬಾರದು ಎಂದು ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ಸಚಿವರಾಗಿದ್ದ ಬಿಜೆಪಿ ಮುಖಂಡ ಅರುಣ್ ಶೌರಿ ಗುಡುಗಿದ್ದಾರೆ.
 
500 ಮತ್ತು 1000 ರೂ ನೋಟುಗಳ ಮೇಲೆ ಹೇರಿದ ನಿಷೇಧ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು ಪ್ರಧಾನಿ ಮೋದಿಗೆ ಸಂಸಾರದ ಕಷ್ಟ ಸುಖಗಳ ಬಗ್ಗೆ ಅರಿವಿಲ್ಲ. ಸಂಸಾರಸ್ಥರನ್ನು ಮಾತ್ರ ಪ್ರಧಾನಿಯಾಗಿ ಆಯ್ಕೆ ಮಾಡಬೇಕು ಎಂದು ಕರೆ ನೀಡಿದ್ದಾರೆ. 
 
ಪ್ರಧಾನಿ ಮೋದಿಗೆ ಪತ್ನಿ, ಮಕ್ಕಳು, ಕುಟುಂಬಗಳು ಎದುರಿಸುವಂತಹ ಕಷ್ಟಗಳ ಬಗ್ಗೆ ಶೂನ್ಯ ಜ್ಞಾನವಿದೆ. ಸಂಸಾರಸ್ಥನಾಗಿದ್ದರೆ ಜನತೆಯ ಕಷ್ಟಗಳ ಬಗ್ಗೆ ಗೊತ್ತಾಗುತ್ತಿತ್ತು. ಕೇವಲ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜನತೆಯನ್ನು ಸಂಕಷ್ಟಕ್ಕೀಡು ಮಾಡುತ್ತಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದು ಕಿಡಿಕಾರಿದ್ದಾರೆ.
 
ಮತ್ತೊಂದೆಡೆ, 500 ರೂ ಮತ್ತು 1000 ರೂಗಳ ನೋಟುಗಳಿಗೆ ನಿಷೇಧ ಹೇರಿದ್ದರಿಂದ ಕಪ್ಪು ಹಣ, ನಕಲಿ ನೋಟು ಚಲಾವಣೆ ಮತ್ತು ಭ್ರಷ್ಟಾಚಾರ ತಡೆ ಸಾಧ್ಯವಾಗಲಿದೆ. ಡಿಸೆಂಬರ್ 31 ರವರೆಗೆ ಹಳೆಯ ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಬದಲಿಸಬಹುದಾಗಿದೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. 
 
2.5 ಲಕ್ಷಕ್ಕಿಂತ ಹೆಚ್ಚು ಹಣವನ್ನು ಬ್ಯಾಂಕ್‌ನಲ್ಲಿ ಜಮೆ ಮಾಡಿದಲ್ಲಿ 200 ಪಟ್ಟು ದಂಡ ಹೇರಲಾಗುವುದು ಎನ್ನುವ ಕೇಂದ್ರ ಸರಕಾರದ ನಿರ್ಧಾರದಿಂದ, ದೇಶದ ಜನತೆ ತೀವ್ರ ತೆರೆನಾದ ಸಂಕಷ್ಟಗಳನ್ನು ಎದುರಿಸಬೇಕಾಗಿ ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments