Webdunia - Bharat's app for daily news and videos

Install App

ಜೈಲಿನಲ್ಲೇ ಇದ್ದು ಚುನಾವಣೆ ಗೆದ್ದ ಅಬ್ದುಲ್‌ ರಶೀದ್‌ಗೆ ಸಂಸದನಾಗಿ ಪ್ರಮಾಣವಚನಕ್ಕೆ ಎನ್‌ಐಎ ಅನುಮತಿ

Sampriya
ಸೋಮವಾರ, 1 ಜುಲೈ 2024 (14:49 IST)
Photo Courtesy X
ನವದೆಹಲಿ: ಜೈಲಿನಲ್ಲಿರುವ ಕಾಶ್ಮೀರಿ ನಾಯಕ ಎಂಜಿನಿಯರ್ ರಶೀದ್ ಎಂದೇ ಗುರುತಿಸಿಕೊಂಡಿರುವ ಅಬ್ದುಲ್ ರಶೀದ್ ಶೇಖ್ ಅವರು  ಬಾರಾಮುಲ್ಲಾದಿಂದ ಜುಲೈ 5 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಎನ್‌ಐಎ ಇಂದು ಸಮ್ಮತಿ ನೀಡಿದೆ.

ರಶೀದ್ ಅವರು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದು, ಅವರಿಗೆ 18 ನೇ ಲೋಕಸಭೆಯಲ್ಲಿ ಅಧಿಕೃತ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಲಿಲ್ಲ.

ಭಯೋತ್ಪಾದನೆ ಹಣಕಾಸಿನ ನೆರವು ನೀಡಿದ ಆರೋಪದ ಹಿನ್ನೆಲೆ ರಶೀದ್ ಮೇಲೆ ಎನ್‌ಐಎ ಯುಎಪಿಎ ಕಾಯ್ದೆ ಅಡಿ ಪ್ರಕರಣ ದಾಖಲಿಸಿರುವುದರಿಂದ 2019ರಿಂದ ಅವರು ಜೈಲಿನಲ್ಲಿದ್ದಾರೆ.

ಎನ್‌ಐಎ ಪ್ರಕರಣದಲ್ಲಿ ಬಂಧನದಲ್ಲಿದ್ದಾಗಲೇ ಅವರು ಬಾರಾಮುಲ್ಲಾದಿಂದ ಚುನಾವಣೆ ಗೆದ್ದಿದ್ದರು. ಲೋಕಸಭೆ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ರಶೀದ್ ಅವರು ಮಧ್ಯಂತರ ಜಾಮೀನು ಅಥವಾ ಕಸ್ಟಡಿ ಪೆರೋಲ್ ಕೋರಿದ್ದರು. ಪಟಿಯಾಲ ಹೌಸ್ ಕೋರ್ಟ್‌ನ ವಿಶೇಷ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಅವರು ರಶೀದ್ ಅವರ ಜಾಮೀನು ಅರ್ಜಿಯ ಕುರಿತು ನಾಳೆ ಆದೇಶ ಹೊರಡಿಸಲಿದ್ದಾರೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಖಲಿಸಿರುವ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಕಳೆದ ಐದು ವರ್ಷಗಳಿಂದ ಬಂಧನದಲ್ಲಿರುವ ಇವರು  ಸಾರ್ವತ್ರಿಕ ಚುನಾವಣೆಯಲ್ಲಿ ಬಾರಾಮುಲ್ಲಾದಿಂದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಸೋಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments