Webdunia - Bharat's app for daily news and videos

Install App

ಉತ್ತರ ಭಾರತದಾದ್ಯಂತ NIA ದಾಳಿ!

Webdunia
ಮಂಗಳವಾರ, 29 ನವೆಂಬರ್ 2022 (12:31 IST)
ನವದೆಹಲಿ : ಗ್ಯಾಂಗ್ಸ್ಟರ್ ಹಾಗೂ ಭಯೋತ್ಪಾದನೆಗೆ ಸಂಬಂಧಪಟ್ಟಂತಹ ಪ್ರಕರಣದ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಸುಮಾರು 20 ಕಡೆಗಳಲ್ಲಿ ದಾಳಿ ನಡೆಸಿದೆ.

ಲಾರೆನ್ಸ್ ಬಿಷ್ಣೋಯ್, ನೀರಜ್ ಬವಾನಾ ಹಾಗೂ ಟಿಲ್ಲಿ ತಾಜ್ಪುರಿಯಾ ಸೇರಿದಂತೆ 6 ಗ್ಯಾಂಗ್ಸ್ಟರ್ಗಳ ವಿಚಾರಣೆಯ ಬಳಿಕ ಎನ್ಐಎ ದೆಹಲಿ-ಎನ್ಸಿಆರ್, ರಾಜಸ್ಥಾನ, ಹರಿಯಾಣ ಹಾಗೂ ಪಂಜಾಬ್ನಾದ್ಯಂತ 20 ಸ್ಥಳಗಳಲ್ಲಿ ದಾಳಿ ನಡೆಸಲು ಪ್ರಾರಂಭಿಸಿದೆ.

ಮೂಲಗಳ ಪ್ರಕಾರ, 6 ಮಂದಿ ಗ್ಯಾಂಗ್ಸ್ಟರ್ಗಳ ವಿಚಾರಣೆ ವೇಳೆ ಇನ್ನೂ ಹಲವು ಗ್ಯಾಂಗ್ಸ್ಟರ್ಗಳ ಹೆಸರುಗಳು ಬಯಲಿಗೆ ಬಂದಿವೆ. ಎನ್ಐಎ ಬಂಧಿತ ಗ್ಯಾಂಗ್ಸ್ಟರ್ಗಳ ಮನೆಗಳು, ಅವರಿಗೆ ಸಹಾಯ ಮಾಡುತ್ತಿದ್ದವರು ಹಾಗೂ ಅವರಿಗೆ ಸಂಬಂಧಪಟ್ಟ ಇತರ ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ. 

ಈ ಗ್ಯಾಂಗ್ಸ್ಟರ್ಗಳು ಇತರ ದೇಶಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ. ಲಾರೆನ್ಸ್ ಬಿಷ್ಣೋಯ್ ಹಾಗೂ ಬವಾನಾ ಗ್ಯಾಂಗ್ ಹೆಸರಿನಲ್ಲಿ ಭಾರತದಲ್ಲಿ ಭಯೋತ್ಪಾದನೆಗಾಗಿ ಸಾಕಷ್ಟು ಹಣ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

ಮುಂದಿನ ಸುದ್ದಿ
Show comments