Webdunia - Bharat's app for daily news and videos

Install App

ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ ನಿರ್ಭಯಾ ಪ್ರಕರಣ...?!

Webdunia
ಬುಧವಾರ, 4 ಮಾರ್ಚ್ 2015 (11:46 IST)
ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿರುವ ರಾಜ್ಯಸಭಾ ಕಲಾಪದಲ್ಲಿ ನಿರ್ಭಯ ರೇಪಿಸ್ಟ್ ಸಂದರ್ಶನ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿ ಪಕ್ಷಗಳ ಸದಸ್ಯರು ಧ್ವನಿ ಎತ್ತಿದ್ದ ಹಿನ್ನೆಲೆಯಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಪ್ರತಿಕ್ರಿಯಿಸಿದ್ದು, ನಿರ್ಭಯಾ ಅತ್ಯಾಚಾರ ಪ್ರಕರಣ ಈಗಾಗಲೇ ನ್ಯಾಯಾಲಯದಲ್ಲಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ. ಅಲ್ಲದೆ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸಾಕ್ಷ್ಯ ಚಿತ್ರವನ್ನು ಪ್ರಸಾರ ಮಾಡಬಾರದು ಎಂದರು.  
 
ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ದೃಶ್ಯ ಮಾಧ್ಯಮದ ಸಂರ್ಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದು ಕಾನೂನು ಬಾಹಿರವಾಗಿದೆ. ಅಲ್ಲದೆ ನಿರ್ಭಯಾ ಅತ್ಯಾಚಾರ ಪ್ರಕರಣವು ಪ್ರಸ್ತುತ ನ್ಯಾಯಾಲಯದಲ್ಲಿದ್ದು, ವಿಚಾರಣೆಯನ್ನು ನಡೆಸಲಾಗುತ್ತಿದೆ. ಅಲ್ಲದೆ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಆರೋಪಿಗಳೊಂದಿಗೆ ನಡೆಸಿರುವ ಸಂದರ್ಶನದ ತುಣುಕು ಅಥವಾ ವಿವರಗಳನ್ನು ಪ್ರಸಾರ ಮಾಡಬಾರದು ಎಂದು ಸರ್ಕಾರ ನಿರ್ಬಂಧ ಹೇರಿದೆ ಎಂದರು. 
 
ಪ್ರತಿ ಪಕ್ಷಗಳು ನಿರ್ಭಯಾ ರೇಪಿಸ್ಟ್ ಗಳ ಸಂದರ್ಶನಕ್ಕೆಂದು ಸರ್ಕಾರ ಸುದ್ದಿ ಮಾಧ್ಯಮಕ್ಕೆ ಅನುಮತಿ ನೀಡಲಾಗಿದೆ. ಇದು ಕಾನೂನು ಬಾಹಿರ. ಈ ಹಿನ್ನೆಲೆಯಲ್ಲಿ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ಗದ್ದಲ ಎಬ್ಬಿಸಿದರು. ಈ ಹಿನ್ನೆಲೆಯಲ್ಲಿ ರಾಜನಾಥ್ ಸಿಂಗ್ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. 

ಇನ್ನು ಪ್ರಕರಣದ ಆರೋಪಿಗಳಲ್ಲೋರ್ವ ಮುಖೇಶ್ ಸಿಂಗ್(ಬಸ್ ಚಾಲಕ) ಎಂಬಾತನನ್ನು ಇತ್ತೀಚೆಗೆ ದೃಶ್ಯ ಮಾಧ್ಯಮವಾದ ಬಿಬಿಸಿ ವಾಹಿನಿಯು ಜೈಲಿನಲ್ಲಿಯೇ ಸಂದರ್ಶನ ನಡೆಸಿತ್ತು. ಈ ವೇಳೆ ಆರೋಪಿ ಸಿಂಗ್, ಅತ್ಯಾಚಾರ ಎಸಗುವಾಗ ಅವಳು(ನಿರ್ಭಯಾ) ವಿರೋಧಿಸದೆ ಸಹಕರಿಸಿದ್ದಿದ್ದರೆ ಅವಳನ್ನು ಅಮಾನುಷವಾಗಿ ಹತ್ಯೆ ಮಾಡುತ್ತಿರಲಿಲ್ಲ. ಅಲ್ಲದೆ ಸಭ್ಯ ಮಹಿಳೆಯರು ರಾತ್ರಿ 9 ಗಂಟೆ ವೇಳೆಯಲ್ಲಿ ಅಲೆಯುವುದು ಸರಿಯಲ್ಲ. ಅತ್ಯಾಚಾರ ವಿಷಯದಲ್ಲಿ ಯುವತಿಗೂ ಕೂಡ ಯುವಕನಷ್ಟೇ ಜವಾಬ್ದಾರಿ ಇರುತ್ತದೆ. ಯುವತಿಯರಿಗೆ ಮನೆಗೆಲಸ ಮೀಸಲಾಗಿದೆ. ಆದರೆ ಅದನ್ನು ಬಿಟ್ಟು ಡಿಸ್ಕೋಗಳಲ್ಲಿ, ಬಾರ್‌ಗಳಲ್ಲಿ ಯುವಕರ ಜೊತೆ ಅಲೆಯುತ್ತಾರೆ. ಅಲ್ಲದೆ ಅಶ್ಲೀಲ ಉಡುಪುಗಳನ್ನು ಧರಿಸುವುದು ಸರಿಯಲ್ಲ ಎಂದು ಹೇಳಿಕೆ ನೀಡಿದ್ದ. 
 
ಈ ಸಂದರ್ಶನದ ತುಣುಕನ್ನು ಮಾರ್ಚ್ 8ನ್ನು ಅಂತಾರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಿಸಲಾಗುವ ಹಿನ್ನೆಲೆಯಲ್ಲಿ ಅಂದು ಪ್ರಸಾರ ಮಾಡುವುದಾಗಿ ತಿಳಿಸಿತ್ತು. ಆದರೆ ಇದಕ್ಕೆ ಕೇಂದ್ರ ಸರ್ಕಾರ ತಡೆಯೊಡ್ಡಿತ್ತು. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸದನದಲ್ಲಿ ತಕಾರವೆತ್ತಿದ್ದವು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments