Webdunia - Bharat's app for daily news and videos

Install App

ನಿರ್ಮಲಾ ಪ್ಯಾಕೇಜ್ 3: ಕರ್ನಾಟಕದ ರಾಗಿಗೆ ಇನ್ನು ರಾಜಯೋಗ

Webdunia
ಶುಕ್ರವಾರ, 15 ಮೇ 2020 (16:57 IST)
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮೂರನೇ ಹಂತದ ಪ್ಯಾಕೇಜ್ ಘೋಷಿಸಿದ್ದು, ಇದರಲ್ಲಿ ಕೃಷಿ ಮೂಲಸೌಕರ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ.


ಕೃಷಿ ಮೂಲ ಸೌಕರ್ಯಾಭಿವೃದ್ಧಿ ನಿಧಿಗೆ 1 ಲಕ್ಷ ಕೋಟಿ ರೂ. ಮೀಸಲಿಡುವುದಾಗಿ ವಿತ್ತ ಸಚಿವೆ ಘೋಷಿಸಿದ್ದಾರೆ. ಜೇನು ಸಾಕಣೆಗೆ 500 ಕೋಟಿ ರೂ., ಪಶುಸಂಗೋಪನೆ, ಟೊಮ್ಯಾಟೋ, ಈರುಳ್ಳಿ, ಆಲೂಗಡ್ಡೆ ಬೆಳೆ ಸಂಸ್ಕರಣೆಗೆ 500 ಕೋಟಿ ರೂ. ಮತ್ತು ಸಾಗಾಟಕ್ಕೆ ಶೇ. 50 ರಷ್ಟು ಸಬ್ಸಿಡಿ ನೀಡುವುದಾಗಿ ಸಚಿವೆ ಘೋಷಿಸಿದ್ದಾರೆ.

ವಿಶೇಷವಾಗಿ ಕರ್ನಾಟಕದ ರಾಗಿ, ತಮಿಳುನಾಡಿನ ಅರಿಶಿಣ ಬೆಳೆ ಬಗ್ಗೆ ಪ್ರಸ್ತಾಪಿಸಿದ ನಿರ್ಮಲಾ ಸೀತಾರಾಮನ್, ಸಾವಯವ ಪದ್ಧತಿ ಕೃಷಿಗೆ ಪ್ರೋತ್ಸಾಹ ನೀಡುವುದಲ್ಲದೆ,  ಈ ಕೃಷಿ ಉತ್ಪನ್ನಗಳ ಬ್ರಾಂಡಿಂಗ್ ಮತ್ತು ಮಾರ್ಕೆಟಿಂಗ್ ಮಾಡುವುದಾಗಿ ಹೇಳಿದ್ದಾರೆ. ಬ್ರ್ಯಾಂಡಿಂಗ್ ಮೂಲಕ ಈ ಉತ್ಪನ್ನಗಳ ಆಹಾರ ಮಾರಾಟಕ್ಕೆ ಹೆಚ್ಚಿನ ಒತ್ತು ನೀಡುವುದಾಗಿ ಹೇಳಿದ್ದಾರೆ.

ಇನ್ನು ಮೀನುಗಾರಿಕೆಗೆ 55 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುವುದು. ಮೀನುಗಾರರಿಗೆ ಬೋಟ್, ಮತ್ತಿತರ ಉಪಕರಣ ಖರೀದಿಗೆ ಸಾಲ ಒದಗಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಇದರ ಜತೆಗೆ ಸಾವಯವ ಕೃಷಿ, ಆಹಾರ, ಔಷಧಗಳಿಗೆ ಪ್ರೋತ್ಸಾಹ ನೀಡುವುದರ ಮೂಲಕ ಪ್ರಧಾನ ಮಂತ್ರಿ ಈ ಮೊದಲು ಕರೆಕೊಟ್ಟಂತೆ ಸ್ವದೇಶೀ ವಸ್ತುಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಮುಂದಿನ ಸುದ್ದಿ
Show comments