ಕನ್ನಡ ಭಾಷೆ ಕಲಿಯುವುದಲ್ಲದೇ ಕರ್ನಾಟಕ ಹಿತಾಸಕ್ತಿಗೆ ಬದ್ಧಳಾಗಿದ್ದೇನೆ: ನಿರ್ಮಲಾ ಸೀತಾರಾಮನ್

Webdunia
ಮಂಗಳವಾರ, 31 ಮೇ 2016 (18:33 IST)
ಹೊರರಾಜ್ಯದವರು ಎನ್ನುವ ಟೀಕೆಗಳಿಂದ ಹೊರಬರಲು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಕನ್ನಡ ಭಾಷೆಯನ್ನು ಕಲಿಯುವುದಲ್ಲದೇ ಕನ್ನಡದ ಹಿತಾಸಕ್ತಿಗೆ ಬದ್ಧವಾಗಿರುತ್ತೇನೆ ಎಂದು ಭರವಸೆ ನೀಡಿದ್ದಾರೆ.
 
ಜೂನ್ 11 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗಾಗಿ ಇಂದು ಬಿಜೆಪಿ ಪರವಾಗಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸತ್ತಿನಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡುವುದಾಗಿ ತಿಳಿಸಿದ್ದಾರೆ.
   
ಬಿಜೆಪಿ ಕಾರ್ಯಕರ್ತಳಾಗಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ ಕುಮಾರ್ ಸೇರಿದಂತೆ ಇತರ ನಾಯಕರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದೇನೆ. ಖಚಿತವಾಗಿ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.  
 
ತಮ್ಮನ್ನು ತಾವು ಪ್ರಧಾನ ಸೇವಕ ಎಂದು ಕರೆದುಕೊಳ್ಳುವ ಪ್ರಧಾನಮಂತ್ರಿ ಮೋದಿಯವರು ನನ್ನನ್ನು ಕಳುಹಿಸಿದ್ದಾರೆ. ಆದ್ದರಿಂದ ನಾನು ಕನ್ನಡದ ಸೇವಕಳಾಗಿ ಕಾರ್ಯನಿರ್ವಹಿಸುತ್ತೇನೆ. ಸಂಸತ್ತಿನಲ್ಲಿ ಕರ್ನಾಟಕದ ಪರವಾಗಿ ಹೋರಾಟ ಮಾಡಲು ಸಿದ್ದ ಎಂದು ಘೋಷಿಸಿದರು.
 
ಕನ್ನಡ ಭಾಷೆ ಅಲ್ಪ ಸ್ವಲ್ಪ ಬರುತ್ತದೆ. ಮುಂಬರುವ ದಿನಗಳಲ್ಲಿ ಕನ್ನಡ ಭಾಷೆ ಕಲಿತು ಸುಲಲಿತವಾಗಿ ಮಾತನಾಡುವ ವಿಶ್ವಾಸವಿದೆ ಎಂದು  ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments