Webdunia - Bharat's app for daily news and videos

Install App

ಇಂದು ರಕ್ಷಣಾ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ ನಿರ್ಮಲಾ ಸೀತಾರಾಮನ್

Webdunia
ಗುರುವಾರ, 7 ಸೆಪ್ಟಂಬರ್ 2017 (15:30 IST)
ದೇಶದ ಮೊದಲ ಸಂಪೂರ್ಣಾವಧಿ ರಕ್ಷಣಾ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. 
ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ರಕ್ಷಣಾ ವಲಯದಲ್ಲಿ ಸ್ಥಳೀಯ ಉತ್ಪಾದನೆಗೆ "ಪ್ರಾಮುಖ್ಯತೆ, ಆದ್ಯತೆ ಮತ್ತು ಗಮನ" ನೀಡುತ್ತೇನೆ ಎಂದು ತಿಳಿಸಿದ್ದಾರೆ.
 
ರಕ್ಷಣಾ ಕ್ಷೇತ್ರದ ಸರಕಾರಿ ಸಂಚಾಲಿತ ಸಂಸ್ಥೆಗಳು ಉತ್ಪಾದಿಸಿದ ಆರು ನೂತನ ಉತ್ಪನ್ನಗಳನ್ನು ಸೇನೆಗೆ ಹಸ್ತಾಂತರಿಸಿದ ಅವರು, ದೇಶದ ಭದ್ರತೆ ಮತ್ತು ಸುರಕ್ಷತೆಗಾಗಿ ಮೇಕ್ ಇನ್ ಇಂಡಿಯಾ ಯೋಜನೆಗೆ ಆದ್ಯತೆ, ಮಹತ್ವ ಮತ್ತು ಗಮನ ನೀಡುವುದಾಗಿ ಘೋಷಿಸಿದ್ದಾರೆ.
 
ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ನಿರ್ಗಮನದ ನಂತರ ರಕ್ಷಣಾ ಸಚಿವಾಲಯದ ಹೆಚ್ಚುವರಿ ಹೊಣೆ ಹೊತ್ತಿದ್ದ ವಿತ್ತ ಸಚಿವ ಅರುಣ್ ಜೇಟ್ಲಿ, ಇದೀಗ ತಮ್ಮ ಹೆಚ್ಚುವರಿ ಹೊಣೆಯನ್ನು ನಿರ್ಮಲಾ ಸೀತಾರಾಮನ್ ಅವರಿಗೆ ವಹಿಸಿದ್ದಾರೆ.
 
ಭಾರತದ ವಿಶ್ವದಲ್ಲಿಯೇ ಶಸ್ತ್ರಾಸ್ತ್ರ ಮತ್ತು ಸೇನಾಉಪಕರಣಗಳನ್ನು ಅಮುದು ಪಡೆಯುವಲ್ಲಿ ಅಗ್ರಸ್ಥಾನ ಪಡೆದಿದೆ. ನಮ್ಮದೇ ಆದ ಮೇಕ್ ಇನ್ ಇಂಡಿಯಾ ಮೂಲಕ ಶಸ್ತ್ರಾಸ್ತ್ರ ಮತ್ತು ಸೇನಾ ಉಪಕರಣಗಳ ತಯಾರಿಕೆಗೆ ಸಂಪೂರ್ಣ ಆದ್ಯತೆ ನೀಡಬೇಕಾಗಿದೆ ಎಂದು ಕೇಂದ್ರ ರಕ್ಷಣಾ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments