Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆಗೂ ಬಿಜೆಪಿಗೂ ಸಂಬಂಧವಿಲ್ಲ: ನಿತೀನ್ ಗಡ್ಕರಿ

Webdunia
ಬುಧವಾರ, 6 ಸೆಪ್ಟಂಬರ್ 2017 (18:40 IST)
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಬಿಜೆಪಿಯ ಕೈವಾಡ ಎನ್ನುವುಂತೆ ಬಿಂಬಿಸುತ್ತಿರುವುದು ದುರದೃಷ್ಟಕರ ಸಂಗತಿ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಆರೋಪಗಳು ಬೇಜವಾಬ್ದಾರಿ, ಆಧಾರರಹಿತ ಮತ್ತು ಸುಳ್ಳಿನ ಕಂತೆ ಎಂದು ಕೇಂದ್ರ ಸಚಿವ ನಿತೀನ್ ಗಡ್ಕರಿ ತಿರುಗೇಟು ನೀಡಿದ್ದಾರೆ.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಸರಕಾರವಾಗಲಿ, ಬಿಜೆಪಿಯಾಗಲಿ ಅಥವಾ ಬಿಜೆಪಿಗೆ ಸಂಬಂಧಪಟ್ಟ ಯಾವುದೇ ಸಂಘಟನೆಗಳಾಗಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಕಾರಣವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ನಮ್ಮ ಸಮಾಜದಲ್ಲಿ ಅಸಹಕಾರ ಮತ್ತು ಧರ್ಮಾಂಧತೆಯಂತಹ ಕೊಳಕನ್ನು ಹೆಚ್ಚಿಸುತ್ತಿದೆ ಎನ್ನುವ ಸೋನಿಯಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯ ಪಕ್ಷವೊಂದರ ಅಧ್ಯಕ್ಷರಾಗಿ ಇಂತಹ ಬೇಜವಾಬ್ದಾರಿಯುತ, ಆಧಾರವಿಲ್ಲದ ಮತ್ತು ಸುಳ್ಳು ಹೇಳಿಕೆಯನ್ನು ನೀಡುವುದು ಅವರ ಘನತೆಗೆ ತಕ್ಕುದಲ್ಲ ಎಂದು ತಿಳಿಸಿದ್ದಾರೆ.
 
ಕೆಲವು ರಾಜಕೀಯ ಪಕ್ಷಗಳು ಕೇಂದ್ರ ಸರಕಾರದ ಬಗ್ಗೆ ನೀಡುತ್ತಿರುವ ಹೇಳಿಕೆಗಳು ದುರದೃಷ್ಟಕರ ಮತ್ತು ಆಕ್ಷೇಪಾರ್ಹವಾಗಿದೆ. ಘಟನೆಯನ್ನು ಈಗಾಗಲೇ ಬಿಜೆಪಿ ನಾಯಕರು ಖಂಡಿಸಿದ್ದಾರೆ ಎಂದರು.
 
ಪ್ರಧಾನಮಂತ್ರಿ ಮೋದಿ ನಾಯಕತ್ವದಲ್ಲಿ ಬಿಜೆಪಿ ಉತ್ತಮ ಅಡಳಿತ ನೀಡುತ್ತಿರುವುದನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕೆಲವರಿಗೆ ಬಿಜೆಪಿಯೆಂದರೆ ಅಲರ್ಜಿ. ಆದ್ದರಿಂದ ಇಂತಹ ಸುಳ್ಳು ಮತ್ತು ಆಧಾರರಹಿತ ಆರೋಪಗಳನ್ನು ಮಾಡುತ್ತಾರೆ ಎಂದು ಮಾಜಿ ಬಿಜೆಪಿ ಅಧ್ಯಕ್ಷ ನಿತೀನ್ ಗಡ್ಕರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments