Webdunia - Bharat's app for daily news and videos

Install App

ಎನ್ ಡಿಎ ಸಭೆಯಲ್ಲಿ ಮುಂದಿಡಲು ಬೇಡಿಕೆಯ ಲಿಸ್ಟನ್ನೇ ತಂದ ನಿತೀಶ್ ಕುಮಾರ್

Krishnaveni K
ಬುಧವಾರ, 5 ಜೂನ್ 2024 (16:42 IST)
ನವದೆಹಲಿ: ಕೇಂದ್ರದಲ್ಲಿ ಸರ್ಕಾರ ರಚಿಸಲು ಸರ್ಕಸ್ ಮಾಡುತ್ತಿರುವ ಬಿಜೆಪಿ ಈಗ ಮಿತ್ರಪಕ್ಷಗಳ ಸಭೆ ಕರೆದಿದೆ. ಎನ್ ಡಿಎ ಸಭೆಗೆ ಹಾಜರಾಗಲು ದೆಹಲಿಗೆ ಬಂದಿರುವ ಜೆಡಿಯು ನಾಯಕ ನಿತೀಶ್ ಕುಮಾರ್ ಬೇಡಿಕೆಗಳ ಪಟ್ಟಿಯನ್ನೇ ತಂದಿದ್ದಾರೆ.

ಬಿಜೆಪಿಗೆ ಸರ್ಕಾರ ರಚಿಸಲು ಈಗ ಟಿಡಿಪಿ ಮತ್ತು ಜೆಡಿಯು ಬೆಂಬಲ ಅನಿವಾರ್ಯ. ಟಿಡಿಪಿ ಈಗಾಗಲೇ ತನ್ನ ಬೇಡಿಕೆ ಸಲ್ಲಿಸಿದ್ದು, ಎನ್ ಡಿಎಗೆ ತನ್ನ ಬೆಂಬಲ ಎಂದು ಘೋಷಣೆ ಮಾಡಿದೆ. ಇದೀಗ ದೆಹಲಿಗೆ ತಲುಪಿರುವ ಜೆಡಿಯು ನಾಯಕ ನಿತೀಶ್ ಕುಮಾರ್ ಕೂಡಾ ಬೇಡಿಕೆಯ ಉದ್ದ ಪಟ್ಟಿಯೊಂದಿಗೇ ಬಂದಿದ್ದಾರೆ ಎನ್ನಲಾಗಿದೆ.

ಎನ್ ಡಿಎ ಸಭೆಯಲ್ಲಿ ನಿತೀಶ್ ಪತ್ರದ ಮುಖೇನ ಬೇಡಿಕೆ ಸಲ್ಲಿಸಲಿದ್ದಾರೆ. ಚಂದ್ರಬಾಬು ನಾಯ್ಡುವಿನಂತೆ ನಿತೀಶ್ ಕೂಡಾ ಬಿಹಾರಕ್ಕೆ ವಿಶೇಷ ಸ್ಥಾನ ಮಾನ ಬೇಡಿಕೆಯಿಡಲಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದಲ್ಲಿ ದೊಡ್ಡ ಸ್ಥಾನಕ್ಕೆ ಬೇಡಿಕೆಯಿಡಬಹುದು.

ಕೇವಲ ಜೆಡಿಯು ಮತ್ತು ನಿತೀಶ್ ಮಾತ್ರವಲ್ಲ, ಇತರೆ ಮಿತ್ರಪಕ್ಷಗಳೂ ಈಗ ತಮ್ಮ ಬೇಡಿಕೆ ಪಟ್ಟಿ ಸಲ್ಲಿಸುತ್ತಿದ್ದಾರೆ. ಬಿಜೆಪಿಗೆ ಈಗ ಮಿತ್ರ ಪಕ್ಷಗಳ ಸಹಕಾರವಿಲ್ಲದೇ ಸರ್ಕಾರ ರಚನೆ ಸಾಧ್ಯವಿಲ್ಲ. ಹೀಗಾಗಿ ಅದನ್ನೇ ಲಾಭ ಮಾಡಿಕೊಂಡಿರುವ ಪಕ್ಷಗಳು ಕೇಂದ್ರದಲ್ಲಿ ಒಂದೊಂದೇ ಹುದ್ದೆಗೆ ಬೇಡಿಕೆ ಮಂಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments