Webdunia - Bharat's app for daily news and videos

Install App

9 ಗಂಟೆಯಲ್ಲಿ 1,000 ದೂರನ್ನು ಆಲಿಸಿದ ನಿತೀಶ್ ಕುಮಾರ್

Webdunia
ಮಂಗಳವಾರ, 2 ಫೆಬ್ರವರಿ 2016 (16:45 IST)
ತಮ್ಮ ಸಾರ್ವಜನಿಕರೊಂದಿಗಿನ ಮಾತುಕತೆ ಕಾರ್ಯಕ್ರಮ 'ಜನತಾ ದರ್ಬಾರ್‌ನಲ್ಲಿ ಮುಖ್ಯಮಂತ್ರಿ' ಯನ್ನು ಮುಂದುವರೆಸಿರುವ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ನಿನ್ನೆ ಬೆಳಿಗ್ಗೆಯಿಂದ ಸಂಜೆಯವರೆಗೂ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. 9 ತಾಸುಗಳ ಕಾಲ 1,000ಕ್ಕಿಂತ ಹೆಚ್ಚು ದೂರುಗಳು ಕೇಳಿ ಬಂದವು ಎಂದು ತಿಳಿದು ಬಂದಿದೆ. 

ಒಟ್ಟು 9 ತಾಸುಗಳ ಕಾಲ 218 ಜನ ಮಹಿಳೆಯರು ಸೇರಿದಂತೆ 10007 ಜನರ ದೂರನ್ನು ಸಿಎಂ ಆಲಿಸಿದರು ಎಂದು ಮುಖ್ಯಮಂತ್ರಿ ಕಾರ್ಯಾಲಯ ಹೇಳಿಕೆ ನೀಡಿದೆ. 
 
ಮಹಾಮೈತ್ರಿಕೂಟ ಸರ್ಕಾರ ರಚನೆಯಾದ ಬಳಿಕ ಇದೇ ಮೊದಲ ಬಾರಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಜನತಾ ದರ್ಬಾರ್ ಕಾರ್ಯಕ್ರಮವನ್ನು ಆಯೋಜಿಸಿದ್ದರು. 
 
ಪೊಲೀಸ್ ವ್ಯವಸ್ಥೆ, ಭೂಸುಧಾರಣೆ, ಸಾಮಾನ್ಯ ಆಡಳಿತ, ಮತ್ತು ನೋಂದಣಿ ಇಲಾಖೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ದೂರುಗಳು ಕೇಳಿ ಬಂದಿದ್ದು, ಈ ಕುರಿತು ಪರಿಶೀಲಿಸಿ ದೂರುದಾರರಿಗೆ ಸಹಾಯ ಮಾಡುವಂತೆ ಪೊಲೀಸ್ ಮುಖ್ಯಸ್ಥ ಪಿ.ಕೆ. ಠಾಕೂರ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ. 
 
2005ರಲ್ಲಿ ನಿತೀಶ್ ಅವರು ಈ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದರು. ಪ್ರತಿ ತಿಂಗಳ ಮೊದಲ ಮೂರು ಸೋಮವಾರ ಅವರು ಜನರನ್ನು ಭೇಟಿಯಾಗಿ ಸಮಸ್ಯೆಗಳನ್ನು ಆಲಿಸುತ್ತಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments