Select Your Language

Notifications

webdunia
webdunia
webdunia
webdunia

ಬಿಹಾರ್ ರಾಜ್ಯಕ್ಕೆ ವಿಶೇಷ ಸ್ಥಾನಮಾನ: ಮೋದಿಯನ್ನು ಭೇಟಿ ಮಾಡಿದ ನಿತೀಶ್ ಕುಮಾರ್

ಬಿಹಾರ್ ರಾಜ್ಯಕ್ಕೆ ವಿಶೇಷ ಸ್ಥಾನಮಾನ: ಮೋದಿಯನ್ನು ಭೇಟಿ ಮಾಡಿದ ನಿತೀಶ್ ಕುಮಾರ್
ನವದೆಹಲಿ , ಗುರುವಾರ, 26 ಮಾರ್ಚ್ 2015 (15:31 IST)
ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಬಿಹಾರ್ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಹಾಗೂ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ಬಿಹಾರ್ ರಾಜ್ಯಕ್ಕೆ ದೊರೆಯುವ ಅನುದಾನ ಹಾಗೂ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.

ಮುಂದುವರಿದು ಮಾತನಾಡಿ, ಕೇಂದ್ರದಿಂದ ಬಿಹಾರ್ ರಾಜ್ಯಕ್ಕೆ ಹಲವು ಯೋಜನೆಗಳಿಗೆ ಅನುದಾನ ದೊರೆಯುತ್ತಿತ್ತು. ಇದೀಗ ಯೋಜನೆಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ, ಸಮತೋಲನದ ಆರ್ಥಿಕ ನೆರವು ನೀಡುವಂತೆ ಪ್ರಧಾನಿಯವರನ್ನು ಕೋರಲಾಗಿದೆ ಎಂದು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿ ಪರಸ್ಪರ ಭೇಟಿ ಮಾಡಿದ್ದಾರೆಯೇ ಹೊರತು ನಿತೀಶ್ ಕುಮಾರ್ ಮತ್ತು ನರೇಂದ್ರ ಮೋದಿಯಾಗಿ ಅಲ್ಲ ಎಂದು ಜೆಡಿ ಯು ನಾಯಕರು ತಿಳಿಸಿದ್ದಾರೆ.

Share this Story:

Follow Webdunia kannada