Select Your Language

Notifications

webdunia
webdunia
webdunia
webdunia

ಮೋದಿ ಮುಖ್ಯಮಂತ್ರಿಯಾಗಲಿ ಎಂದು ಎಡವಟ್ಟು ಮಾಡಿಕೊಂಡ ನಿತೀಶ್ ಕುಮಾರ್

Nitish Kumar

Krishnaveni K

ನವದೆಹಲಿ , ಸೋಮವಾರ, 27 ಮೇ 2024 (13:24 IST)
ನವದೆಹಲಿ: ನರೇಂದ್ರ ಮೋದಿ ಮತ್ತೆ ಮುಖ್ಯಮಂತ್ರಿಯಾಗಲಿ ಎನ್ನುವ ಮೂಲಕ ಬಿಹಾರ ಸಿಎಂ ನಿತೀಶ್ ಕುಮಾರ್ ಎಡವಟ್ಟು ಮಾಡಿಕೊಂಡಿದ್ದಾರೆ.

ಪಾಟ್ನಾದ ಸಾಹಿಬ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ರಾಲಿಯಲ್ಲಿ ಮಾತನಾಡುವಾಗ ನಿತೀಶ್ ಕುಮಾರ್ ಈ ರೀತಿ ತಪ್ಪಾಗಿ ಹೇಳಿಕೆ ನೀಡಿದ್ದಾರೆ. ಬಳಿಕ ತಮ್ಮ ತಪ್ಪು ತಿಳಿಯುತ್ತಿದ್ದಂತೇ ಎಚ್ಚೆತ್ತುಕೊಂಡು ಪ್ರಧಾನಿಯಾಗಲಿ ಎಂದಿದ್ದಾರೆ.

ಬಿಹಾರದ ಎಲ್ಲಾ 40 ಕ್ಷೇತ್ರದ ಜೊತೆಗೆ ನಾವು ಈ ಬಾರಿ 400 ಪ್ಲಸ್ ಕ್ಷೇತ್ರಗಳನ್ನು ಗೆಲ್ಲಲು ಬಯಸುತ್ತೇವೆ. ಮೋದಿ ಮತ್ತೆ ಮುಖ್ಯಮಂತ್ರಿಯಾಗಲಿ, ದೇಶ ಅಭಿವೃದ್ಧಿಯಾಗಲಿ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಆದರೆ ತಮ್ಮ ತಪ್ಪು ಅರಿವಾಗುತ್ತಿದ್ದಂತೇ ಪ್ರಧಾನಿಯಾಗಲಿ ಎಂದರು. ಮೋದಿ ಪ್ರಧಾನಿಯಾದರೆ ದೇಶದ ಜೊತೆಗೆ ಬಿಹಾರವೂ ಅಭಿವೃದ್ಧಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಲಾಲೂ ಪ್ರಸಾದ್ ಯಾದವ್ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಾಹಿಬ್ ಕ್ಷೇತ್ರದಿಂದ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಬಿಜೆಪಿಯ ರವಿಶಂಕರ್ ಪ್ರಸಾದ್ ಕಣದಲ್ಲಿದ್ದಾರೆ. ಅವರ ಪರವಾಗಿ ಜೆಡಿಯು ನಾಯಕ, ಸಿಎಂ ನಿತೀಶ್ ಕುಮಾರ್ ಮತ ಯಾಚನೆ ಮಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನಡು ರಸ್ತೆಯಲ್ಲಿ ನಮಾಜ್, ಮಂಗಳೂರಿನಲ್ಲಿ ವಿವಾದ