Webdunia - Bharat's app for daily news and videos

Install App

ಮೋದಿ ಮುಖ್ಯಮಂತ್ರಿಯಾಗಲಿ ಎಂದು ಎಡವಟ್ಟು ಮಾಡಿಕೊಂಡ ನಿತೀಶ್ ಕುಮಾರ್

Krishnaveni K
ಸೋಮವಾರ, 27 ಮೇ 2024 (13:24 IST)
ನವದೆಹಲಿ: ನರೇಂದ್ರ ಮೋದಿ ಮತ್ತೆ ಮುಖ್ಯಮಂತ್ರಿಯಾಗಲಿ ಎನ್ನುವ ಮೂಲಕ ಬಿಹಾರ ಸಿಎಂ ನಿತೀಶ್ ಕುಮಾರ್ ಎಡವಟ್ಟು ಮಾಡಿಕೊಂಡಿದ್ದಾರೆ.

ಪಾಟ್ನಾದ ಸಾಹಿಬ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ರಾಲಿಯಲ್ಲಿ ಮಾತನಾಡುವಾಗ ನಿತೀಶ್ ಕುಮಾರ್ ಈ ರೀತಿ ತಪ್ಪಾಗಿ ಹೇಳಿಕೆ ನೀಡಿದ್ದಾರೆ. ಬಳಿಕ ತಮ್ಮ ತಪ್ಪು ತಿಳಿಯುತ್ತಿದ್ದಂತೇ ಎಚ್ಚೆತ್ತುಕೊಂಡು ಪ್ರಧಾನಿಯಾಗಲಿ ಎಂದಿದ್ದಾರೆ.

ಬಿಹಾರದ ಎಲ್ಲಾ 40 ಕ್ಷೇತ್ರದ ಜೊತೆಗೆ ನಾವು ಈ ಬಾರಿ 400 ಪ್ಲಸ್ ಕ್ಷೇತ್ರಗಳನ್ನು ಗೆಲ್ಲಲು ಬಯಸುತ್ತೇವೆ. ಮೋದಿ ಮತ್ತೆ ಮುಖ್ಯಮಂತ್ರಿಯಾಗಲಿ, ದೇಶ ಅಭಿವೃದ್ಧಿಯಾಗಲಿ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಆದರೆ ತಮ್ಮ ತಪ್ಪು ಅರಿವಾಗುತ್ತಿದ್ದಂತೇ ಪ್ರಧಾನಿಯಾಗಲಿ ಎಂದರು. ಮೋದಿ ಪ್ರಧಾನಿಯಾದರೆ ದೇಶದ ಜೊತೆಗೆ ಬಿಹಾರವೂ ಅಭಿವೃದ್ಧಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಲಾಲೂ ಪ್ರಸಾದ್ ಯಾದವ್ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಾಹಿಬ್ ಕ್ಷೇತ್ರದಿಂದ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಬಿಜೆಪಿಯ ರವಿಶಂಕರ್ ಪ್ರಸಾದ್ ಕಣದಲ್ಲಿದ್ದಾರೆ. ಅವರ ಪರವಾಗಿ ಜೆಡಿಯು ನಾಯಕ, ಸಿಎಂ ನಿತೀಶ್ ಕುಮಾರ್ ಮತ ಯಾಚನೆ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶುಭಾಂಶು ಶುಕ್ಲಾ ಹೊರಟಿದ್ದ ಸ್ಪೇಸ್ ಎಕ್ಸ್ ಡ್ರ್ಯಾಗನ್ ನೌಕೆ ಯಶಸ್ವೀ ಡಾಕಿಂಗ್

ಕೃತಕ ಫುಡ್‌ ಕಲರ್‌ ಬೆನ್ನಲ್ಲೇ ಕೆಲ ಔಷಧಗಳು, ಸೌಂದರ್ಯವರ್ಧಕಗಳ ಬಳಕೆಗೆ ನಿಷೇಧ ಹೇರಿದ ರಾಜ್ಯ ಸರ್ಕಾರ

ರೈಲ್ವೆ ಹಳಿಗಳ ಮೇಲೆ ಕಾರು ಚಲಾಯಿಸಿ ಮಹಿಳೆಯ ಹುಚ್ಚಾಟ, Video

ವಯನಾಡು ಭೂಕುಸಿತದ ವೇಳೆ ನಿರ್ಮಾಣವಾಗಿದ್ದ ಬೈಲಿ ಸೇತುವೆ ಗೋಡೆ ಬಿರುಕು: ಸಂಚಾರ ಸ್ಥಗಿತ

ವಿಮಾನ ದುರಂತಕ್ಕೆ ಕಾರಣ ಹುಡುಕುತ್ತಿದ್ದ ಅಧಿಕಾರಿಗಳಿಗೆ ಸಿಕ್ತು ಬಿಗ್‌ ಅಪ್ಡೇಟ್‌

ಮುಂದಿನ ಸುದ್ದಿ
Show comments