Webdunia - Bharat's app for daily news and videos

Install App

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

Krishnaveni K
ಭಾನುವಾರ, 28 ಜನವರಿ 2024 (11:20 IST)
ಪಾಟ್ನಾ: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಮತ್ತೆ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಜೊತೆ ಕೈಜೋಡಿಸುವ ಸಾಧ‍್ಯತೆಯಿದೆ.

ಇಂದು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅವರಿಗೆ ನಿತೀಶ್ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ಇದರೊಂದಿಗೆ ಬಿಹಾರದಲ್ಲಿ ಲಾಲೂ ಪ್ರಸಾದ್ ಯಾದವ್ ನೇತೃತ್ವದ  ಆರ್ ಜೆಡಿ ಜೊತೆಗಿನ ಸಖ‍್ಯ ಕೊನೆಗೊಳಿಸಿದ್ದಾರೆ. ಅಲ್ಲದೆ, ಅಲ್ಲಿನ ಸಮ್ಮಿಶ್ರ ಸರ್ಕಾರವೂ ಮುರಿದುಬಿದ್ದಂತಾಗಿದೆ. ಕಳೆದ 18 ತಿಂಗಳಿನ ಮಿತ್ರತ್ವಕ್ಕೆ ತೆರ ಬಿದ್ದಿದೆ.

ಇತ್ತೀಚೆಗಷ್ಟೇ ಸೀಟು ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡಿದ್ದ ನಿತೀಶ್ ಕುಮಾರ್ ಇಂಡಿಯಾ ಮೈತ್ರಿಕೂಟದಿಂದ ಹೊರಬಂದಿದ್ದರು.ಇದೀಗ ವಿಪಕ್ಷಗಳ ಮೈತ್ರಿ ಕೂಟದಿಂದಲೂ ಹೊರಬರುವ ಮೂಲಕ ಬಿಜೆಪಿ ಜೊತೆ ಕೈ ಜೋಡಿಸುವ ಎಲ್ಲಾ ಲಕ್ಷಣಗಳಿವೆ.

ಈ ಮೊದಲು ನಿತೀಶ್ ಬಿಜೆಪಿಯ ಎನ್ ಡಿಎ ಮೈತ್ರಿಕೂಟದ ಭಾಗವಾಗಿದ್ದರು. ಆದರೆ ಬಳಿಕ ನರೇಂದ್ರ ಮೋದಿ ಜೊತೆಗಿನ ಭಿನ್ನಾಭಿಪ್ರಾಯಗಳಿಂದಾಗಿ ಎನ್ ಡಿಎದಿಂದ ಹೊರಬಂದಿದ್ದರು. 18 ತಿಂಗಳ ಜೊತೆ ಅಂದಿನ ಯುಪಿಎ ಮಿತ್ರ ಪಕ್ಷವಾಗಿದ್ದ ಆರ್ ಜೆಡಿ ಜೊತೆ ಸಖ‍್ಯ ಬೆಳೆಸಿ ಸರ್ಕಾರ ರಚಿಸಿದ್ದರು.

ಇದೀಗ ಜೆಡಿಯು ಪಕ್ಷದ ನಾಯಕರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸದ್ಯದಲ್ಲೇ ಅವರ ಮುಂದಿನ ರಾಜಕೀಯ ನಡೆ ಏನೆಂದು ತಿಳಿದುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments