Webdunia - Bharat's app for daily news and videos

Install App

ಲಾಲು ಪ್ರಸಾದ್‌ರೊಂದಿಗೆ ಕೈ ಜೋಡಿಸಿದ ನಂತ್ರ ಡಿಎನ್‌ಎ ತಪ್ಪಾಗಿದೆ: ಬಿಜೆಪಿ ಲೇವಡಿ

Webdunia
ಬುಧವಾರ, 2 ಸೆಪ್ಟಂಬರ್ 2015 (17:38 IST)
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರೊಂದಿಗಿನ ಮೈತ್ರಿಯ ನಂತರ ಬಿಹಾರ್ ಸಿಎಂ ನಿತೀಶ್ ಕುಮಾರ್ ಡಿಎನ್‌‍ಎ ತಪ್ಪಾಗಿ ಹೋಗಿದೆ ಎಂದು ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಢಿ ಹೇಳಿದ್ದಾರೆ.
 
ಲಾಲು ಯಾದವ್ ಅವರೊಂದಿಗೆ ಹೊಂದಾಣಿಕೆಯ ನಂತರ ನಿತೀಶ್ ಕುಮಾರ್ ಉತ್ತಮ ಮಾನಸಿಕ ಶಕ್ತಿಯನ್ನು ಕಳೆದುಕೊಂಡಿದ್ದಾರೆ, ಲಾಲು ಯಾದವ್ ಅವರ ಭಾಷೆಯಂತೆ ನಿತೀಶ್ ಕುಮಾರ್ ಕೂಡಾ ಅದೇ ಶೈಲಿಯಲ್ಲಿ ಮಾತನಾಡಲು ಆರಂಭಿಸಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. 
 
ಬಿಜೆಪಿಯೊಂದಿಗಿರುವವರೆಗೆ ನಿಮ್ಮ ಡಿಎನ್‌ಎ ತಪ್ಪಾಗಿರಲಿಲ್ಲ. ಲಾಲು ಯಾದವ್ ಅವರೊಂದಿಗೆ ಕೈ ಜೋಡಿಸಿದ ನಂತರ ನಿಮ್ಮ ಡಿಎನ್‌ಎಯಲ್ಲಿ ತಪ್ಪಾಗಿದೆ ಎಂದು ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
 
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಡಿಎನ್‌ಎ ಹೇಳಿಕೆಗೆ ತಿರುಗೇಟು ನೀಡಿದ್ದ ನಿತೀಶ್ ಕುಮಾರ್, ನಮ್ಮ ಪೂರ್ವಜರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಕುಟುಂಬಕ್ಕೆ ಸೇರಿದವರಾಗಿದ್ದಾರೆ ಎಂದು ಹೇಳಿಕೆ ನೀಡಿದ್ದರು.
 
ನಿತೀಶ್ ಕುಮಾರ್ ಅವರ ಒಂದೇ ಕುಟುಂಬ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ. ದೇಶದ 50 ಕೋಟಿ ಜನ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ ಎಂದು ರೂಢಿ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments