Webdunia - Bharat's app for daily news and videos

Install App

ಕಾಂಗ್ರೆಸ್ ಜತೆಗಿನ ಒಡಕಿಗೆ ಕಾರಣ ವಿವರಿಸಿದ ನಿತೀಶ್ ಕುಮಾರ್

Webdunia
ಸೋಮವಾರ, 3 ಜುಲೈ 2017 (13:39 IST)
ನವದೆಹಲಿ: 2019 ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಧಾನಿಯಾಗುವ ಮಹತ್ವಾಕಾಂಕ್ಷೆ ತನಗಿಲ್ಲ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ. ಜೆಡಿಯು ಧುರೀಣ ಇದೀಗ ಮಿತ್ರ ಪಕ್ಷವಾಗಿದ್ದ ಕಾಂಗ್ರೆಸ್ ವಿರುದ್ಧವೇ ತಿರುಗಿ ಬಿದ್ದಿದ್ದಾರೆ.


ಒಂದು ವಿರೋಧ ಪಕ್ಷವಾಗಿ ಕಾಂಗ್ರೆಸ್ ಪ್ರತಿಕ್ರಿಯಿಸುವ ರಾಜಕಾರಣ ಮಾಡಬೇಕಿತ್ತು. ಆದರೆ ಅದೀಗ ಕ್ರಿಯಾಶೀಲತೆಯನ್ನೇ ಮರೆತಿದೆ ಎಂದು ನಿತೀಶ್ ಕುಮಾರ್ ಆ ಪಕ್ಷದೊಂದಿಗಿನ ಒಡಕಿನ ಕಾರಣ ವಿವರಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆ ವಿಚಾರವಾಗಿ ತನ್ನ ಮಿತ್ರ ಪಕ್ಷ ಆರ್ ಜೆಡಿ, ಕಾಂಗ್ರೆಸ್ ನೊಂದಿಗೆ ಜೆಡಿಯು ವರಿಷ್ಠ ನಂಟು ಕಡಿದುಕೊಂಡು ವಿರೋಧಿ ಬಿಜೆಪಿ ಪಾಳಯ ಸೇರಿದ್ದಾರೆ. ಎನ್ ಡಿಎ ಅಭ್ಯರ್ಥಿ ರಮಾನಾಥ್ ಕೋವಿಂದ್ ಗೆ ಅವರು ಬೆಂಬಲ ನೀಡುತ್ತಿರುವುದು ಲಾಲೂ ಪ್ರಸಾದ್ ಯಾದವ್ ಕೆಂಗಣ್ಣಿಗೆ ಗುರಿಯಾಗಿದೆ.

ಮುಂದಿನ ರಾಜಕೀಯ ಲಾಭವನ್ನು ದೃಷ್ಟಿಯಲ್ಲಿಟ್ಟುಕೊಂಡೇ ನಿತೀಶ್ ಈ ನಿರ್ಧಾರ ಕೈಗೊಂಡಿದ್ದಾರೆಂದು ವಿರೋಧಿಗಳು ಆರೋಪಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಅವರು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗುವ ಯಾವುದೇ ಇರಾದೆ ತಮಗಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments