Webdunia - Bharat's app for daily news and videos

Install App

ಅಮಿತ್ ಶಾ ತಂತ್ರ ಸಫಲ: ಎನ್‌ಡಿಎದೊಂದಿಗೆ ವಿಲೀನವಾದ ಜೆಡಿಯು ಪಕ್ಷ

Webdunia
ಶನಿವಾರ, 19 ಆಗಸ್ಟ್ 2017 (18:32 IST)
ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷ ಇಂದು ಸಭೆ ನಡೆಸಿ ಎನ್‌ಡಿಎ ಪಕ್ಷದೊಂದಿಗೆ ವಿಲೀನವಾಗುವ ನಿರ್ಣಯವನ್ನು ಅಂಗೀಕರಿಸಿದೆ. 
ಮುಖ್ಯಮಂತ್ರಿಯ ಅಧಿಕೃತ ನಿವಾಸದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ, ಜೆಡಿಯು ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಗೊಳ್ಳುವ ನಿರ್ಣಯವನ್ನು ಒಮ್ಮತದಿಂದ ಅಂಗೀಕರಿಸಿದೆ ಎಂದು ಹಿರಿಯ ಜೆಡಿ (ಯು) ನಾಯಕ ಕೆ.ಸಿ ತ್ಯಾಗಿ ತಿಳಿಸಿದ್ದಾರೆ.
 
ಜೆಡಿ (ಯು) ನಾಯಕರ ಪ್ರಕಾರ, 70 ಶಾಸಕರು, ಇಬ್ಬರು ಲೋಕಸಭಾ ಎಂಪಿಗಳು ಮತ್ತು ಏಳು ರಾಜ್ಯ ಸಭೆ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.
 
ಜೆಡಿಯು ಪಕ್ಷದ ಮಾಜಿ ಅದ್ಯಕ್ಷ ಶರದ್ ಯಾದವ್ ನೇತೃತ್ವದ ನಿಯೋಗ, ಚುನಾವಣೆ ಆಯೋಗವನ್ನು ಭೇಟಿ ಮಾಡಿ ಪಕ್ಷದ ಚಿಹ್ನೆ(ಬಾಣ)ಯನ್ನು ತಮ್ಮ ಬಣಕ್ಕೆ ನೀಡಬೇಕು ಎಂದು ಒತ್ತಾಯಿಸಿರುವ ಮಧ್ಯೆಯೇ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೀಡಿದ ಆಹ್ವಾನಕ್ಕೆ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಮ್ಮತಿ ಸೂಚಿಸಿದೆ.
  
ಜೆಡಿಯು ಪಕ್ಷದ ಚಿಹ್ನೆಯಾದ ಬಾಣದ ಗುರುತನ್ನು ನಮಗೆ ನೀಡುವಂತೆ ಕೇಂದ್ರ ಚುನಾವಣೆ ಆಯೋಗವನ್ನು ಕೋರುತ್ತಿದ್ದೇವೆ. ಶರದ್ ಯಾದವ್ ನೇತೃತ್ವದ ಜೆಡಿಯು ನಮ್ಮ ನಿಜವಾದ ಪಕ್ಷವಾಗಿದೆಯೇ ಹೊರತು ನಿತೀಶ್ ಕುಮಾರ್ ಅವರದ್ದಲ್ಲ ಎಂದು ಹಿರಿಯ ಜೆಡಿಯು ನಾಯಕ ಅರುಣ್ ಶ್ರೀವಾತ್ಸವ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments