Select Your Language

Notifications

webdunia
webdunia
webdunia
webdunia

ಮಮತಾ ಬ್ಯಾನರ್ಜಿಯನ್ನು ಭೇಟಿಯಾದ ನಿತೀಶ್

ಮಮತಾ ಬ್ಯಾನರ್ಜಿ
ಪಾಟ್ನಾ : ಬಿಜೆಪಿ ವಿರುದ್ಧ ಹೋರಾಡಲು ವಿರೋಧ ಪಕ್ಷಗಳು ಒಂದಾಗುವ ಅಗತ್ಯವಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬಿಹಾರದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಸೋಮವಾರ ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದರು. ಈ ವೇಳೆ ಅಭಿವೃದ್ಧಿ ಹಾಗೂ ರಾಜಕೀಯ ವಿಷಯಗಳನ್ನು ಚರ್ಚಿಸಿದರು.

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ಯಾನರ್ಜಿ, ವಿರೋಧ ಪಕ್ಷಗಳು ಒಟ್ಟಾಗಿ ಕುಳಿತು ಮುಂದಿನ ಕ್ರಮವನ್ನು ನಿರ್ಧರಿಸುತ್ತದೆ. ನಮ್ಮ ಧ್ಯೆಯ ಸ್ಪಷ್ಟವಾಗಿದ್ದರೆ, ಯಾವುದೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಫೀಲ್ಡಿಗಿಳಿದ ಮಾಜಿ ಪ್ರಧಾನಿ HDD