Webdunia - Bharat's app for daily news and videos

Install App

ಬಿಹಾರ ವಿಧಾನಸಭೆ ವಿಸರ್ಜನೆಗೆ ಸಿದ್ಧ

Webdunia
ಶನಿವಾರ, 14 ನವೆಂಬರ್ 2015 (16:02 IST)
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ರಾಜ್ಯಪಾಲ ರಾಮನಾಥ್ ಕೋವಿಂದ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದು, ಪ್ರಸಕ್ತ ವಿಧಾನಸಭೆಯನ್ನು ವಿಸರ್ಜಿಸಲು ಮನವಿ ಮಾಡಿಕೊಂಡಿದ್ದಾರೆ.

 
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ರಾಜ್ಯಪಾಲ ರಾಮನಾಥ್ ಕೋವಿಂದ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದು, ಪ್ರಸಕ್ತ ವಿಧಾನಸಭೆಯನ್ನು ವಿಸರ್ಜಿಸಲು ಮನವಿ ಮಾಡಿಕೊಂಡಿದ್ದಾರೆ.
 
ನಿತೀಶ್ ಕುಮಾರ್, ರಾಜ್ಯಪಾಲ ರಾಮನಾಥ್ ಕೋವಿಂದ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ನವನ್ನು ಸಲ್ಲಿಸಿದ್ದಾರೆ ಮತ್ತು ಸಂಪುಟದ ನಿರ್ಧಾರವನ್ನು ಅವರಿಗೆ ತಿಳಿಸಿದ್ದಾರೆ", ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜೀನಾಮೆಯನ್ನು ಸ್ವೀಕರಿಸಿರುವ ರಾಜ್ಯಪಾಲರು, ಮುಂದಿನ ಸರ್ಕಾರ ರಚನೆಯಾಗುವವರೆಗೆ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರೆಯಲು ನಿತೀಶ್ ಅವರಿಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಮಹಾಮೈತ್ರಿಕೂಟದ ನೇತೃತ್ವ ವಹಿಸಿದ್ದ ನಿತೀಶ್ ಕುಮಾರ್ ಅವರ ಜೆಡಿಯು, ಮಿತ್ರ ಪಕ್ಷಗಳಾದ ಆರ್‌ಜೆಡಿ ಮತ್ತು ಕಾಂಗ್ರೆಸ್ ಜೊತೆ ಸಭೆ ನಡೆಸಿದ ಬಳಿಕ ನೂತನ ಸರ್ಕಾರವನ್ನು ರಚಿಸುವ ಪ್ರಸ್ತಾವನೆಯನ್ನು ಮುಂದಿಡಲಿದ್ದಾರೆ.
 
ಹೊಸದಾಗಿ ಆಯ್ಕೆಯಾಗಿರುವ ಜೆಡಿ-ಯು ಶಾಸಕರು ನಿತೀಶ್ ಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಿದ್ದಾರೆ. ಬಳಿಕ ಮಹಾ ಮೈತ್ರಿಕೂಟದ ನಾಯಕನಾಗಿ ಅವರನ್ನು ಚುನಾಯಿಸಲಾಗುತ್ತದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments