Webdunia - Bharat's app for daily news and videos

Install App

ನಿತೀಶ್‌ ರಾಜಿನಾಮೆ ವಿಷಯ ಗೊತ್ತು – ಮಲ್ಲಿಕಾರ್ಜುನ ಖರ್ಗೆ

geetha
ಭಾನುವಾರ, 28 ಜನವರಿ 2024 (21:00 IST)
ನವದೆಹಲಿ :ಬಿಹಾರದ ಸಿಎಂ ನಿತೀಶ್‌ ಕುಮಾರ್‌ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಈ ರೀತಿ ಬರುವವರು ಹೋಗುವವರು ಬೇಕಾದಷ್ಟು ಜನರು ಇದ್ದಾರೆ ಎಂದು ಕುಟುಕಿದರು. ಐಎನ್‌ಡಿಐಎ ಒಕ್ಕೂಟಕ್ಕೆ ವಿದಾಯ ಹೇಳಿ ಎನ್‌ಡಿಎ ಒಕ್ಕೂಟ ಸೇರಲಿರುವ ನಿತೀಶ್‌ ಕುಮಾರ್‌ ನಿರ್ಧಾರದ ಬಗ್ಗೆ ನನಗೆ ಮೊದಲೇ ತಿಳಿದಿತ್ತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಅವರು ಮತ್ತು ನಾವು ಈ ಮೊದಲು ಒಟ್ಟಿಗೆ ಹೋರಾಟ ನಡೆಸಿದ್ದೆವು. ನಾನು ಲಾಲು ಪ್ರಸಾದ್‌ ಯಾದವ್‌ ಮತ್ತು ತೇಜಸ್ವಿ ಯಾದವ್‌ ಅವರೊಂದಿಗೆ ಮಾತುಕತೆ ನಡೆಸಿದಾಗ ಅವರೂ  ಸಹ ನಿತೀಶ್‌ ನಿರ್ಗಮಿಸುವುದು ಖಚಿತ ಎಂದು ಹೇಳಿದ್ದರು. ಅವರು ಉಳಿಯಲು ಬಯಸಿದ್ದರೆ ನಮ್ಮಲ್ಲೇ ಉಳಿಯಬಹುದಿತ್ತು. ಆದರೆ ಅವರು ಹೊರಹೋಗಲು ನಿರ್ಧರಿಸಿದ್ದರು. ಈಗ ನಾವು ಏನಾದರೂ ತಪ್ಪು ಹೇಳಿಕೆ ನೀಡಿದರೆ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ಖರ್ಗೆ ಹೇಳಿದರು. ಲಾಲು ಮತ್ತು ತೇಜಸ್ವಿ ನುಡಿದಿದ್ದ ಭವಿಷ್ಯ ಇಂದು ನಿಜವಾಗಿದೆ.  ಈ ರೀತಿಯ ಆಯಾರಾಮ್‌ ಗಯಾರಾಮ್‌ ಗಳು ದೇಶದಲ್ಲಿ ಬೇಕಾದಷ್ಟು ಮಂದಿ ಇದ್ದಾರೆ ಎಂದು ಖರ್ಗೆ ಟೀಕಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಯಾದಗಿರಿ: ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ದುರುಳರು, ಎಸಿ, ಸೋಫಾ ಬೆಂಕಿಗಾಹುತಿ

ಮನೆ ಬಿಟ್ಟು ಹೋದ ಮಗಳು: ಮನನೊಂದ ಕುಟುಂಬದಿಂದ ಮೂವರು ಆತ್ಮಹತ್ಯೆಗೆ ಶರಣು

ಮುಂದಿನ ಸುದ್ದಿ
Show comments