Webdunia - Bharat's app for daily news and videos

Install App

ಮುಖ್ಯಮಂತ್ರಿ ನಿತೀಶ್ ಕುಮಾರ್‌ಗೆ ಸಾಮಾಜಿಕ ನ್ಯಾಯ ಪ್ರಶಸ್ತಿ

Webdunia
ಶುಕ್ರವಾರ, 29 ಜನವರಿ 2016 (20:23 IST)
ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಅಮೆರಿಕ ಮೂಲದ ಪೆರಿಯಾರ್ ಇಂಟರ್‌ನ್ಯಾಷನಲ್ ಸಂಸ್ಥೆ ಕೆ.ವೀರಮಣಿ ಸಾಮಾಜಿಕ ನ್ಯಾಯ ಪ್ರಶಸ್ತಿಗೆ ಆಯ್ಕೆ ಮಾಡಿದೆ. 
 
ದಿವಂಗತ ಪ್ರಧಾನಿ ವಿ.ಪಿ.ಸಿಂಗ್,ಎಂ.ಕರುಣಾನಿಧಿ, ಸೀಕಾರಾಮ್ ಕೇಸರಿ ಮತ್ತು ಮಾಯಾವತಿಯವರಿಗೆ ದೊರೆತಂತಹ ಸಾಮಾಜಿಕ ನ್ಯಾಯ ಪ್ರಶಸ್ತಿ  ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಅತಿ ಶ್ರೇಷ್ಠ ಗೌರವ ದೊರೆತಂತಾಗಿದೆ ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಕೆ.ಸಿ ತ್ಯಾಗಿ ಸಂತಸ ವ್ಯಕ್ತಪಡಿಸಿದ್ದಾರೆ. 
 
ಕಾಂಗ್ರೆಸ್ ಸಂಸದ ವಿ.ಹನುಮಂತ್ ರಾವ್ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಛಗನ್ ಭುಜಬಲ್‌ ಅವರಿಗೆ ಕೂಡಾ ಸಾಮಾಜಿಕ ನ್ಯಾಯ ಪ್ರಶಸ್ತಿ ದೊರೆತಿದ್ದು, ಪ್ರಶಸ್ತಿ ಪಡೆದವರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುತ್ತಿದೆ.  
 
ಸಮಾಜದ ಶೋಷಿತರು ಮತ್ತು ಹಿಂದುಳಿದ ವರ್ಗದವರಿಗೆ ಕೂಡಾ ನಿತೀಶ್ ಅವರಿಗೆ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ ಎಂದು ತಿಳಿಸಿದ್ದಾರೆ.
 
ಪಾಟ್ನಾದಲ್ಲಿ ನಿತೀಶ್ ಕುಮಾರ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲು ಪ್ರಶಸ್ತಿ ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ತ್ಯಾಗಿ ಮಾಹಿತಿ ನೀಡಿದ್ದಾರೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments