Webdunia - Bharat's app for daily news and videos

Install App

ನಿತೀಶ್ ಕುಮಾರ್‌ಗೆ ಗಲ್ಲು ಶಿಕ್ಷೆಯಾಗಬಹುದು: ಲಾಲು ಯಾದವ್

Webdunia
ಬುಧವಾರ, 26 ಜುಲೈ 2017 (20:19 IST)
ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ 1991ರಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಹತ್ಯೆ ಪ್ರಕರಣದಲ್ಲಿ ನಿತೀಶ್‌ಗೆ ಗಲ್ಲು ಶಿಕ್ಷೆಯಾಗಬಹುದು ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ.

ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ವಾಗ್ದಾಳಿ ನಡೆಸಿದ ಲಾಲು, ಬಿಹಾರ್‌ದಲ್ಲಿ ರಾಷ್ಟ್ರಪತಿ ಅಡಳಿತವನ್ನು ನಾವು ಬಯಸುವುದಿಲ್ಲ. ಹೊಸ ನಾಯಕನ ಆಯ್ಕೆ ಮಾಡುತ್ತೇವೆ. ಹೊಸ ಸರಕಾರದಲ್ಲಿ ನೀವು ಬೇಡ, ತೇಜಸ್ವಿ ಕೂಡಾ ಬೇಡ. ಎಂದು ತಿಳಿಸಿದ್ದಾರೆ.
 
ಆರ್‌ಜೆಡಿ, ಕಾಂಗ್ರೆಸ್ ಮತ್ತು ಜೆಡಿಯು ನಿಂದ ಹೊಸ ನಾಯಕನ ಆಯ್ಕೆ ಮಾಡಲಾಗುವುದು. ಹೊಸ ಸರಕಾರ ರಚಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇವೆ ಎಂದು ಗುಡುಗಿದ್ದಾರೆ.
 
ಬಿಜೆಪಿ ಸಂಘಮುಕ್ತ ಭಾರತ ಬಯಸಿದ್ದ ನಿತೀಶ್ ಕುಮಾರ್, ಇದೀಗ ಬಿಜೆಪಿ, ಸಂಘ ಪರಿವಾರದೊಂದಿಗೆ ಸೆಟ್ಟಿಂಗ್ ಮಾಡಿಕೊಂಡಿದ್ದಾರೆ. ನಿತೀಶ್ ನೋಟ್ ಬ್ಯಾನ್ ಬಗ್ಗೆ ಹೊಗಳುತ್ತಾರೆ. ಆದರೆ, ಮೈತ್ರಿಯ ಬಗ್ಗೆ ಮಾತನಾಡುವುದಿಲ್ಲ. ಇದು ಏನು ಸೂಚಿಸುತ್ತೆ ಹೇಳಿ ನೋಡೋಣ ಎಂದು ಸವಾಲ್ ಹಾಕಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments