Webdunia - Bharat's app for daily news and videos

Install App

ದೇಶದ ಏಕತೆ ಜತೆ ರಾಜಿ ಇಲ್ಲ: ನರೇಂದ್ರ ಮೋದಿ

Webdunia
ಶುಕ್ರವಾರ, 22 ಏಪ್ರಿಲ್ 2022 (10:02 IST)
ನವದೆಹಲಿ : ರಾಷ್ಟ್ರ ರಾಜಧಾನಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ನಡೆಯುತ್ತಿರುವ ಮತೀಯ ಘರ್ಷಣೆಗಳ ಬಗ್ಗೆ ಇದೇ ಮೊದಲ ಬಾರಿ ಪರೋಕ್ಷವಾಗಿ ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ,

‘ಯಾವುದೇ ಕಾರಣಕ್ಕೂ ದೇಶದ ಸಮಗ್ರತೆ ಹಾಗೂ ಏಕತೆಯ ಜೊತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ’ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.

ಗುರುವಾರ ನಾಗರಿಕ ಸೇವೆಗಳ ದಿನಾಚರಣೆಯಲ್ಲಿ ಮಾತನಾಡಿದ ಪ್ರಧಾನಿ, ‘ನಮ್ಮದು ಪ್ರಜಾಪ್ರಭುತ್ವ ದೇಶ. ಇಲ್ಲಿ ಸಮಾನತೆ, ಜಾಗತೀಕರಣ ಹಾಗೂ ಏಕತೆ ಎಂಬ ಮೂರು ಸವಾಲುಗಳು ಇಂದು ನಮ್ಮ ಮುಂದಿವೆ.

ಯಾವತ್ತೂ ನಾವು ಭಾರತದ ಏಕತೆ ಹಾಗೂ ಸಮಗ್ರತೆಯ ಜೊತೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಅದು ನಮ್ಮ ಹಾಗೂ ಪ್ರತಿಯೊಬ್ಬ ನಾಗರಿಕ ಸೇವಾ ಅಧಿಕಾರಿಯ ಪ್ರಥಮ ಹಾಗೂ ಅತ್ಯುನ್ನತ ಜವಾಬ್ದಾರಿಯಾಗಿದೆ’ ಎಂದು ಹೇಳಿದರು.

ಸ್ವಾತಂತ್ರ್ಯ ದೊರೆತ 100ನೇ ವರ್ಷ ಭಾರತ ಹೇಗಿರಬೇಕು ಎಂಬ ದೂರದೃಷ್ಟಿಯನ್ನು ನಾವು ಎಲ್ಲರೊಂದಿಗೆ ಹಂಚಿಕೊಳ್ಳಬೇಕು. ದೇಶದ ಪ್ರತಿಯೊಂದು ಜಿಲ್ಲೆಯೂ ಮುಂದಿನ 25 ವರ್ಷಗಳಿಗೆ ಗುರಿ ನಿಗದಿಪಡಿಸಿಕೊಂಡು ಅದನ್ನು ಸಾಧಿಸುವತ್ತ ಶ್ರಮಿಸಬೇಕು ಎಂದೂ ಇದೇ ವೇಳೆ ನಾಗರಿಕ ಸೇವೆಯ ಅಧಿಕಾರಿಗಳನ್ನುದ್ದೇಶಿಸಿ ಮೋದಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಮುಂದಿನ ಸುದ್ದಿ
Show comments