ಸಮಾಜವಾದಿ ಪಕ್ಷದ ಮುಖಂಡ ಶಿವಪಾಲ್ ಯಾದವ್ ಸಚಿವ ಸ್ಥಾನ ಮತ್ತು ಪಕ್ಷದ ಹುದ್ದೆಗಳಿಗೆ ರಾಜೀನಾಮೆ ನೀಡಿದ ಮಾರನೇ ದಿನವೇ, ನಾನಿರುವವರೆಗೆ ಪಕ್ಷವನ್ನು ವಿಭಜಿಸಲು ಬಿಡುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.
ಸಮಾಜವಾದಿ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಅಖಿಲೇಶ್ ಯಾದವ್ ವಜಾಗೊಳಿಸಿದ ಸಚಿವ ಗಾಯತ್ರಿ ಪ್ರಜಾಪತಿಯನ್ನು ಮರಳಿ ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದು ಹೇಳಿದ್ದಾರೆ. ಶಿವಪಾಲ್ ಮತ್ತು ಅಖಿಲೇಶ್ ಯಾದವ್ ಮಧ್ಯೆ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪುತ್ರ ಅಖಿಲೇಶ್ ಮತ್ತು ಸಹೋದರ ಶಿವಪಾಲ್ ಯಾದವ್ ಮಧ್ಯೆ ಶಾಂತಿದೂತರಾಗಿರುವ ಮುಲಾಯಂ, ನಾನು ಬದುಕಿರುವವರೆಗೆ ಪಕ್ಷದಲ್ಲಿ ಭಿನ್ನಮತ ಉಲ್ಭಣಗೊಳ್ಳುವುದಿಲ್ಲ ಎಂದು ಗುಡುಗಿದ್ದಾರೆ.
ನಮ್ಮದು ದೊಡ್ಡ ಕುಟುಂಬ. ಸಹಜವಾಗಿಯೆ ಭಿನ್ನತೆಗಳು ಎದುರಾಗುತ್ತವೆ. ಅಖಿಲೇಶ್ ಯಾದವ್ ಮತ್ತು ಶಿವಪಾಲ್ ಯಾದವ್ ಮಧ್ಯೆ ವೈಮನಸ್ಸಿಲ್ಲ. ಅಖಿಲೇಶ್ ಶೀಘ್ರದಲ್ಲಿ ಶಿವಪಾಲ್ ಯಾದವ್ರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ರಾಮಗೋಪಾಲ್, ಅಖಿಲೇಶ್ ಯಾದವ್ ಮತ್ತು ಶಿವಪಾಲ್ ಮಧ್ಯೆ ಯಾವುದೇ ರೀತಿಯ ಭಿನ್ನಮತವಿಲ್ಲ. ಮಾಧ್ಯಮ ವರದಿಗಳು ಉಹಾಪೋಹವಾಗಿವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ