Webdunia - Bharat's app for daily news and videos

Install App

ಯಾವುದೇ ಅಹಂ ಇಲ್ಲ, ಬಿಜೆಪಿ ವಿರುದ್ಧ ಹೋರಾಡಲು ಸಿದ್ಧ: ಮಮತಾ ಬ್ಯಾನರ್ಜಿ

Webdunia
ಮಂಗಳವಾರ, 25 ಏಪ್ರಿಲ್ 2023 (06:21 IST)
ಪ್ರತಿಪಕ್ಷಗಳು ಒಟ್ಟಾಗಿವೆ ಎಂಬ ಸಂದೇಶವನ್ನು ದೇಶಕ್ಕೆ ತಿಳಿಸಬೇಕು. ಅದಾದ ಬಳಿಕ ನಾವು ಪ್ರಣಾಳಿಕೆ ಹಾಗೂ ಇತರ ವಿವರಗಳನ್ನು ನಿರ್ಧರಿಸುತ್ತೇವೆ. ನಾವು ದೇಶದ ಇತರ ಎಲ್ಲ ವಿರೋಧ ಪಕ್ಷಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಇಲ್ಲಿ ಯಾವುದೇ ಅಹಂಕಾರ ಹಾಗೂ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದರು.

ಈ ವೇಳೆ ನಿತೀಶ್ ಕುಮಾರ್ ಮಾತನಾಡಿ, ನಾನು ದೀದಿಯೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದೇನೆ. ಕೋಲ್ಕತ್ತಾದ ಪ್ರಗತಿಯನ್ನು ಕಂಡು ಬೆರಗಾಗಿದ್ದೇನೆ. ರಾಜ್ಯ ಸರ್ಕಾರ ಬಂಗಾಳದಲ್ಲಿ ತಂದಿರುವ ಅಭಿವೃದ್ಧಿ ಶ್ಲಾಘನೀಯವಾಗಿದೆ. ನಾವು ದೀದಿಯೊಂದಿಗೆ ರಾಜಕೀಯ ಚರ್ಚೆ ನಡೆಸಿದ್ದೇವೆ. ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಿ ಬಿಜೆಪಿ ವಿರುದ್ಧ ಹೋರಾಡಲು ನಿರ್ಧರಿಸಿದ್ದೇವೆ ಎಂದರು. 

ನಾವು ಏನೇ ನಿರ್ಧಾರ ತೆಗೆದುಕೊಂಡರೂ ಅದು ನಮ್ಮ ದೇಶದ ಹಿತಕ್ಕಾಗಿ ಇರಬೇಕು. ಆದರೆ ಪ್ರಸ್ತುತ ನಮ್ಮ ದೇಶವನ್ನು ಆಳುತ್ತಿರುವ ಪಕ್ಷಕ್ಕೆ ಅಭಿವೃದ್ಧಿಯ ಬಗ್ಗೆ ಕಾಳಜಿ ಇಲ್ಲ. ಅವರಿಗೆ ರಾಜಕೀಯದ ಬಗ್ಗೆ ಮಾತ್ರ ಕಾಳಜಿ ಇದೆ. ಈ ಹಿನ್ನೆಲೆಯಲ್ಲಿ ದೇಶದ ಅಭಿವೃದ್ಧಿಯು ಹಿನ್ನೆಡೆಯಾಗಿದೆ. ಕೋಲ್ಕತ್ತಾ ಹಾಗೂ ಬಿಹಾರ ಹೆಚ್ಚು ಅಭಿವೃದ್ಧಿಯಾಗಿದೆ. ಆದರೆ ಇದನ್ನೆಲ್ಲ ಮಾಡಿರುವುದು ಕೇಂದ್ರ ಸರ್ಕಾರವಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments