ಹೆಣ್ಣುಮಕ್ಕಳು ಮೈ ಕಾಣುವಂತೆ ಬಟ್ಟೆ ಹಾಕ್ಕೊಂಡು ಬಂದ್ರೆ ಈ ದೇವಾಲಯಗಳಿಗೆ ನೋ ಎಂಟ್ರಿ

Webdunia
ಮಂಗಳವಾರ, 6 ಜೂನ್ 2023 (12:35 IST)
ಡೆಹ್ರಾಡೂನ್ : ಉತ್ತರಾಖಂಡದ ಪ್ರಮುಖ ಮೂರು ದೇವಾಲಯಗಳ ಪ್ರವೇಶಕ್ಕೆ ಮಹಿಳೆಯರು ಮತ್ತು ಹುಡುಗಿಯರಿಗೆ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಲಾಗಿದೆ. ಮೈ ಕಾಣುವಂತೆ ಬಟ್ಟೆ ಹಾಕ್ಕೊಂಡು ಬಂದರೆ ದೇವಾಲಯಗಳಿಗೆ ಪ್ರವೇಶ ನೀಡಲ್ಲ ಎಂದು ಸೂಚನೆ ನೀಡಲಾಗಿದೆ.
 
ಉತ್ತರಾಖಂಡದ ಮಹಾನಿರ್ವಾಣಿ ಅಖಾರದ ಅಧೀನದಲ್ಲಿ ಬರುವ ದೇವಾಲಯಗಳಲ್ಲಿ ಈ ವಸ್ತ್ರ ಸಂಹಿತೆ ಕಡ್ಡಾಯ ಎನ್ನಲಾಗಿದೆ. ಮಹಾನಿರ್ವಾಣಿ ಅಖಾರದ ಕಾರ್ಯದರ್ಶಿ ಮತ್ತು ಅಖಿಲ ಭಾರತೀಯ ಅಖಾರ ಪರಿಷತ್ತಿನ ಅಧ್ಯಕ್ಷ ಶ್ರೀಮಹಾಂತ್ ರವೀಂದ್ರ ಪುರಿ ಅವರು, “ಮಹಿಳೆಯರು ಮತ್ತು ಹುಡುಗಿಯರು ತುಂಡುಡುಗೆ ಧರಿಸಿ ದೇವಾಲಯಗಳಿಗೆ ಪ್ರವೇಶಿಸುವಂತಿಲ್ಲ” ಎಂದು ತಿಳಿಸಿದ್ದಾರೆ. 

ಹರಿದ್ವಾರದ ಕಂಖಾಲ್ನಲ್ಲಿರುವ ದಕ್ಷ ಪ್ರಜಾಪತಿ ದೇವಾಲಯ, ಪೌರಿ ಜಿಲ್ಲೆಯ ನೀಲಕಂಠ ಮಹಾದೇವ ದೇವಾಲಯ ಮತ್ತು ಡೆಹ್ರಾಡೂನ್ನ ತಪಕೇಶ್ವರ ಮಹಾದೇವ ದೇವಾಲಯಗಳಲ್ಲಿ ಈ ನಿಯಮ ಜಾರಿಗೊಳಿಸಲಾಗಿದೆ. ದೇವಾಲಯವು ಆತ್ಮಾವಲೋಕನಕ್ಕೆ ಸ್ಥಳವಾಗಿದೆಯೇ ಹೊರತು ಮನರಂಜನೆಗಾಗಿ ಅಲ್ಲ. ಹೀಗಾಗಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಲ್ಲಿ ನಿಯಮ ಪಾಲಿಸುವಂತೆ ಮನವಿ ಮಾಡಲಾಗಿದೆ ಎಂದು ರವೀಂದ್ರ ಅವರು ಹೇಳಿದ್ದಾರೆ.

ಮಹಿಳೆಯರು ಮತ್ತು ಹುಡುಗಿಯರು ದೇವಾಲಯದ ಪೂಜೆಗೆ ಆಗಮಿಸುವುದಿದ್ದರೆ, ಭಾರತೀಯ ಸಂಪ್ರದಾಯದ ಪ್ರಕಾರ ಬಟ್ಟೆಗಳನ್ನು ಧರಿಸಬೇಕು. ಆಗ ಮಾತ್ರ ಅವರಿಗೆ ದೇವಾಲಯಕ್ಕೆ ಪ್ರವೇಶ ಸಿಗುತ್ತದೆ. ದೇಹದ 80% ನಷ್ಟು ಭಾಗವನ್ನು ಮುಚ್ಚಿಕೊಂಡು ಬಂದರೆ ದೇವಾಲಯಗಳಿಗೆ ಬರಬಹುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಕರೂರು ದುರಂತದ ಬಳಿಕ ವಿಜಯ್ ಸಾರ್ವಜನಿಕ ರ್ಯಾಲಿಗೆ ಟಿವಿಕೆ ಮನವಿ

ಕ್ಷಮಿಸು ಮಮ್ಮಿ, ಡೆತ್‌ನೋಟ್ ಬರೆದಿಟ್ಟು ಮೆಟ್ರೋ ಹಳಿಗೆ ಹಾರಿದ ವಿದ್ಯಾರ್ಥಿ

ಡಿಕೆ ಶಿವಕುಮಾರ್ ಬೆಂಬಲಿಗರ ದೆಹಲಿ ಯಾತ್ರೆ ಹಿಂದಿನ ಉದ್ದೇಶವೇನು

ದಿಡೀರ್ ದೆಹಲಿ ವಿಮಾನವೇರಿದ ಡಿಕೆ ಶಿವಕುಮಾರ್, ರಾಜಕೀಯ ವಲಯದಲ್ಲಿ ಭಾರೀ ಕುತೂಹಲ

ಮುಂದಿನ ಸುದ್ದಿ
Show comments