ಕೆರೆ ಜಾಗಗಳಲ್ಲಿ ಮನೆ ನಿರ್ಮಾಣ ಆದೇಶ ರದ್ದು: ಸಿಎಂ ಬೊಮ್ಮಾಯಿ

Webdunia
ಶುಕ್ರವಾರ, 20 ಮೇ 2022 (14:22 IST)
ಬೆಂಗಳೂರಿನಲ್ಲಿ ಕೆರೆ ಜಾಗಗಳಲ್ಲಿ ಬಿಡಿಎ ವಸತಿ ನಿರ್ಮಾಣ ಕುರಿತ ಅಧಿಸೂಚನೆಯನ್ನು ರದ್ದುಗೊಳಿಸಿದ್ದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಾದ ರಾಮಮುರ್ತಿನಗರದ ನಾಗಪ್ಪ ಬಡಾವಣೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳಿಗೆ ಉಗಿದು ಈ ಆದೇಶ ರದ್ದು ಮಾಡುವಂತೆ ಸೂಚಿಸಿದ್ದೇನೆ ಎಂದರು.
ಕೆರೆ ಪ್ರದೇಶದಲ್ಲಿ ಬಡಾವಣೆಗಳನ್ನು ನಿರ್ಮಿಸುವ ಸಂಬಂಧ ಹಿರಡಿಸಲಾಗಿದ್ದ ಅಧಿಸೂಚನೆಯನ್ನು ರದ್ದು ಮಾಡಲಾಗಿದೆ. ಯಾವುದೇ  ಅಧಿಸೂಚಿತ ಕೆರೆ ಪ್ರದೇಶದಗಳ ಮೇಲೆ ಬಡಾವಣೆಗಳನ್ನು ಮಂಜೂರು ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ ಎಂದರು.
ಬೆಂಗಳೂರು ನಗರ, ಯಲಹಂಕ ತಾಲ್ಲೂಕು,ಯಲಹಂಕ ಹೋಬಳಿ, ದೊಡ್ಡಬೆಟ್ಟಹಳ್ಳಿ ಗ್ರಾಮದಲ್ಲಿನ ಜಲಾವೃತ ಪ್ರದೇಶವನ್ನು ವಸತಿ ವಲಯಕ್ಕೆ ಬದಲಾವಣೆ ಮಾಡಲು ಕೋರಿದ್ದ ಮೇರೆಗೆ  ಹೊರಡಿಸಲಾಗಿದ್ದ ಅಧಿಸೂಚನೆಯನ್ನು ತಕ್ಷಣ ಹಿಂಪಡೆಯಲಾಗಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಧರ್ಮಸ್ಥಳ ಪ್ರಕರಣದ ಸೂತ್ರಧಾರಿಗಳು ಸಿಎಂ ಸುತ್ತ ಇದ್ದಾರೆ: ಬಿವೈ ವಿಜಯೇಂದ್ರ

ಬೆದರಿಕೆಯಾಗಿರುವ ಬಜರಂಗದಳವನ್ನು ನಿಷೇಧಿಸಬೇಕು: ಬಿಕೆ ಹರಿಪ್ರಸಾದ್ ಒತ್ತಾಯ

ಮುಂದಿನ ಸುದ್ದಿ
Show comments