Webdunia - Bharat's app for daily news and videos

Install App

ಖಾದ್ಯ ತೈಲ ಆಮದಿಗೆ ಆಮದು ಸುಂಕ ಇಲ್ಲ: ಸರ್ಕಾರ

Webdunia
ಬುಧವಾರ, 25 ಮೇ 2022 (10:44 IST)
ನವದೆಹಲಿ : ಹಣದುಬ್ಬರ ಹಾಗೂ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಲು ಕೇಂದ್ರ ಸರ್ಕಾರ ಇನ್ನೊಂದು ಮಹತ್ವದ ಕ್ರಮ ಕೈಗೊಂಡಿದೆ.

ವಾರ್ಷಿಕ 20 ಲಕ್ಷ ಟನ್ ಸೋಯಾಬೀನ್ ಹಾಗೂ ಕಚ್ಚಾ ಸೂರ್ಯಕಾಂತಿ ಎಣ್ಣೆಯ ಮೇಲಿನ ಆಮದು ಸುಂಕ ಹಾಗೂ ಕೃಷಿ ಮೂಲಸೌಕರ್ಯ ಅಭಿವೃದ್ಧಿ ಸೆಸ್ ಅನ್ನು ಸಂಪೂರ್ಣ ತೆಗೆದು ಹಾಕುವುದಾಗಿ ಮಂಗಳವಾರ ರಾತ್ರಿ ಘೋಷಿಸಿದೆ

ಈ ನಿರ್ಣಯದಿಂದಾಗಿ ಈಗಾಗಲೇ ಕೇಜಿಗೆ 200 ರು. ಮೀರಿ ಗ್ರಾಹಕರ ತಲೆಬಿಸಿಗೆ ಕಾರಣವಾಗಿರುವ ಖಾದ್ಯ ತೈಲ ಬೆಲೆ ಇಳಕೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಈ ನಿರ್ಣಯ ಮುಂದಿನ 2 ಹಣಕಾಸು ವರ್ಷಗಳಾದ 2022-23 ಮತ್ತು 2023-24ಕ್ಕೆ ಅನ್ವಯವಾಗಲಿದೆ. ಇದರಿಂದಾಗಿ ಒಟ್ಟಾರೆ 2024ರ ಮಾಚ್ರ್ 31ರವರೆಗೆ 80 ಲಕ್ಷ ಟನ್ ಖಾದ್ಯ ತೈಲ ಆಮದು ಸುಂಕ ರಹಿತವಾಗಿ ಭಾರತ ಪ್ರವೇಶಿಸಲಿದೆ ಎಂದು ಹೇಳಬಹುದಾಗಿದೆ.

ಇದು ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಕೊಂಚ ಮಟ್ಟದ ನೆಮ್ಮದಿ ನೀಡಲಿದೆ. ಸೋಯಾ ಬೀನ್ ಎಣ್ಣೆಯ ಬೆಲೆ ಲೀಟರ್ಗೆ ಸುಮಾರು 3 ರು. ಕಡಿಮೆಯಾಗಲಿದೆ ಎಂದು ಸಾಲ್ವೆಂಟ್ ಎಕ್ಸ್ಟ್ರಾಕ್ಟರ್ ಆಫ್ ಇಂಡಿಯಾದ ನಿರ್ದೇಶಕ ಬಿ.ವಿ.ಮೆಹ್ತಾ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

ಮುಂದಿನ ಸುದ್ದಿ
Show comments