Webdunia - Bharat's app for daily news and videos

Install App

ಅಸ್ಸಾಂ ನಾಗರಿಕರ ಪಟ್ಟಿಯಿಂದ ಯಾವ ಭಾರತೀಯನನ್ನು ಹೊರಗಿಡುವುದಿಲ್ಲ - ಕೇಂದ್ರ ಗೃಹ ಸಚಿವ

Webdunia
ಶುಕ್ರವಾರ, 3 ಆಗಸ್ಟ್ 2018 (15:44 IST)
ನವದೆಹಲಿ : ಅಸ್ಸಾಂನಲ್ಲಿ ಬಿಡುಗಡೆ ಮಾಡಿರುವ ನಾಗರಿಕರ ರಾಷ್ಟ್ರೀಯ ನೋಂದಣಿಯ ಅಂತಿಮ ಕರಡು ಪಟ್ಟಿಯಲ್ಲಿ 40 ಲಕ್ಷ ಜನರನ್ನು ಕೈಬಿಟ್ಟಿರುವುದು ದೊಡ್ಡ ವಿವಾದ ಸೃಷ್ಟಿ ಮಾಡಿರುವ  ಹಿನ್ನೆಲೆಯಲ್ಲಿ ಇದೀಗ ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ಪಟ್ಟಿಯಿಂದ ಯಾವ ಭಾರತೀಯನನ್ನು ಹೊರಗಿಡುವುದಿಲ್ಲ ಎಂದು ಭರವಸೆ  ನೀಡಿದ್ದಾರೆ.


''ಅಸ್ಸಾಂನ ನಾಗರಿಕರ ರಾಷ್ಟ್ರೀಯ ನೋಂದಣಿಯ(ಎನ್‌ಆರ್‌ಸಿ) ಪಟ್ಟಿಯ ಪ್ರಕ್ರಿಯೆ ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿದೆ. ಸುಪ್ರೀಂಕೋರ್ಟಿನ ಮಾರ್ಗದರ್ಶನದ ಪ್ರಕಾರವೇ ನಾವು ನಡೆದುಕೊಂಡಿದ್ದೇವೆ. ಪಟ್ಟಿಯಿಂದ ಯಾವ ಭಾರತೀಯನನ್ನು ಹೊರಗಿಡುವುದಿಲ್ಲ ಎಂದು ಪ್ರತಿಯೊಬ್ಬರಿಗೂ ಭರವಸೆ ನೀಡುವೆ. ಯಾರೂ ಕೂಡ ಚಿಂತಿಸುವ ಅಗತ್ಯವಿಲ್ಲ. ಎನ್‌ಆರ್‌ಸಿ ಅಂತಿಮ ಪಟ್ಟಿಯಿಂದ ಹೊರಗುಳಿದಿರುವ ನಾಗರಿಕರು ವಿದೇಶಿಗರ ಟ್ರಿಬ್ಯೂನಲ್‌ಗೆ ಮೇಲ್ಮನವಿ ಸಲ್ಲಿಸಬಹುದು'' ಎಂದು ರಾಜ್ಯಸಭೆಯಲ್ಲಿ ಗೃಹ ಸಚಿವ ರಾಜ್‌ನಾಥ್ ಸಿಂಗ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments