Webdunia - Bharat's app for daily news and videos

Install App

ಅಫ್ಘಾನಿಸ್ತಾನದಲ್ಲಿ ಕನ್ನಡಿಗರ ಪ್ರಾಣಹಾನಿ ಬಗ್ಗೆ ಮಾಹಿತಿ ಇಲ್ಲ: ಬೊಮ್ಮಾಯಿ

Webdunia
ಸೋಮವಾರ, 23 ಆಗಸ್ಟ್ 2021 (14:20 IST)
ಬೆಂಗಳೂರು: ಅಫ್ಘಾನಿಸ್ತಾನದಲ್ಲಿ ಎಷ್ಟು ಜನ ಕನ್ನಡಿಗರು ಸಿಲುಕಿದ್ದಾರೆಂಬ ನಿಖರ ಮಾಹಿತಿಯಾಗಲೀ, ಕನ್ನಡಿಗರಿಗೆ ಪ್ರಾಣಹಾನಿ ಆಗಿರುವ ಬಗ್ಗೆಯಾಗಲೀ ಸರ್ಕಾರಕ್ಕೆ ಇನ್ನೂ ಯಾವುದೆ ಮಾಹಿತಿಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಭಾರತದ ರಾಯಭಾರಿ ಕಚೇರಿ ಜೊತೆ ಕರ್ನಾಟಕ ಸರ್ಕಾರ ನಿರಂತರ ಸಂಪರ್ಕದಲ್ಲಿದೆ. ಈಗಾಗಲೇ ಅಫ್ಘಾನ್ ನಲ್ಲಿರುವ ಕನ್ನಡಿಗರ ರಕ್ಷಣೆ ಮತ್ತು ತಾಯ್ನಾಡಿಗೆ ಕರೆ ತರಲು ಸರ್ಕಾರ ಮಾಹಿತಿ ಕಲೆ ಹಾಕುತ್ತಿದೆ. ವಿವಿದೆಡೆ ಸಿಲುಕಿರುವ ಕನ್ನಡಿಗರನ್ನು ಪತ್ತೆ ಹಚ್ಚಿ ಕರೆತರಲಾಗುತ್ತದೆ. ಅಫ್ಘನ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಅಲ್ಲಿ ಎಷ್ಟು ಜನ ಕನ್ನಡಿಗರು ಸಿಲುಕಿರುವ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದರು.
ಈಗಾಗಲೇ ಕೆಲವು ಕನ್ನಡಿಗರನ್ನು ಅಫ್ಘಾನ್ ನಿಂದ ಕರೆತರಲಾಗಿದೆ. ಆ ದೇಶದಲ್ಲಿರುವ ಕನ್ನಡಿಗರ ಸಂಪರ್ಕ ಮಾಡಲಾಗುತ್ತಿದೆ. ಎಷ್ಟು ಜನ ಕನ್ನಡಿಗರಿದ್ದಾರೆ ಎಂಬ ಬಗ್ಗೆ ನಿಖರ ಮಾಹಿತಿ ಇಲ್ಲ. ಕನ್ನಡಿಗರಿಗೆ ಪ್ರಾಣಹಾನಿ ಆಗಿರುವ ಬಗ್ಗೆ ಮಾಹಿತಿ ಸಿಕ್ಕಿಲ್ಲ ಎಂದರು.
ಅಫ್ಘನ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಅಲ್ಲಿ ಎಷ್ಟು ಜನ ಕನ್ನಡಿಗರು ಸಿಲುಕಿರುವ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ದೂರದಲ್ಲಿರುವ ಕನ್ನಡಿಗರ ರಕ್ಷಣೆಗಾಗಿ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ವಿವಿದೆಡೆ ಸಿಲುಕಿರುವ ಕನ್ನಡಿಗರನ್ನು ಪತ್ತೆ ಹಚ್ಚಿ ಕರೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments