ರಾಹುಲ್ ಗಾಂಧಿ, ಖರ್ಗೆಗೆ ಆಹ್ವಾನವಿಲ್ಲ: ಡಿನ್ನರ್ ಗೆ ಹೋದ ಶಶಿ ತರೂರ್ ಮೇಲೆ ಈಗ ಕಾಂಗ್ರೆಸ್ಸಿಗರ ಸಿಟ್ಟು

Krishnaveni K
ಶನಿವಾರ, 6 ಡಿಸೆಂಬರ್ 2025 (10:01 IST)
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೌರವಾರ್ಥ ಕೇಂದ್ರ ಸರ್ಕಾರ ಆಯೋಜಿಸಿದ್ದ ಔತಣಕೂಟಕ್ಕೆ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರನ್ನು ಕಡೆಗಣಿಸಿ ಶಶಿ ತರೂರ್ ಗೆ ಆಹ್ವಾನ ನೀಡಲಾಗಿತ್ತು. ಇದೀಗ ಕಾಂಗ್ರೆಸ್ಸಿಗೆ ಸಿಟ್ಟು ಶಶಿ ತರೂರ್ ಮೇಲೆ ತಿರುಗಿದೆ.
 

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಅವಕಾಶ ನೀಡಿಲ್ಲ ಎಂದು ರಾಹುಲ್ ಗಾಂಧಿ ತಗಾದೆ ತೆಗೆದಿದ್ದರು. ಆದರೆ ಇದಕ್ಕೆ ಸ್ಪಷ್ಟನೆ ನೀಡಿದ್ದ ಕೇಂದ್ರ ಸರ್ಕಾರ ಯಾರನ್ನು ಭೇಟಿ ಮಾಡಬೇಕು ಎಂಬುದು ಪ್ರವಾಸ ಮಾಡುವ ದೇಶದ ನಾಯಕರ ತೀರ್ಮಾನವಾಗಿರುತ್ತದೆ ಎಂದಿತ್ತು.

ಆದರೆ ಈಗ ಔತಣಕೂಟಕ್ಕೂ ವಿಪಕ್ಷಗಳ ಪರವಾಗಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅಥವಾ ರಾಜ್ಯ ಸಭೆ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಆಹ್ವಾನ ನೀಡಿಲ್ಲ. ಬದಲಾಗಿ ವಿಪಕ್ಷಗಳ ಪರವಾಗಿ ಶಶಿ ತರೂರ್ ಗೆ ಆಹ್ವಾನ ನೀಡಲಾಗಿತ್ತು. ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಬಂಡಾಯವೆದ್ದು, ಬಿಜೆಪಿ ಪರ ವಾಲಿರುವ ಶಶಿ ತರೂರ್ ಗೆ ಆಹ್ವಾನ ನೀಡಿದ್ದು ಕಾಂಗ್ರೆಸ್ ನಾಯಕರ ಪಿತ್ತ ನೆತ್ತಿಗೇರಿಸಿದೆ.

ಶಶಿ ತರೂರ್ ಯಾಕೆ ಇನ್ನೂ ಕಾಂಗ್ರೆಸ್ ನಲ್ಲಿದ್ದಾರೆ? ಅವರು ಅಧಿಕೃತವಾಗಿ ಬಿಜೆಪಿಗೆ ಸೇರಬಹುದಲ್ವೇ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಮತ್ತೆ ಕೆಲವರು ತಮ್ಮ ಪಕ್ಷದ ಉನ್ನತ ನಾಯಕರನ್ನು ಕಡೆಗಣಿಸಿ ತನಗೆ ಆಹ್ವಾನ ನೀಡಿದಾಗ ಅದನ್ನು ತಿರಸ್ಕರಿಸದೇ ಔತಣಕೂಟಕ್ಕೆ ಹೋದ ಶಶಿ ತರೂರ್ ರನ್ನು ಪಕ್ಷದಿಂದ ಕಿತ್ತು ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments