Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿ ಅನಾರೋಗ್ಯಕ್ಕೆ ಈಡಾಗಿದ್ದು ಯಾಕೆ ಗೊತ್ತಾ..?

ಕುಮಾರಸ್ವಾಮಿ ಅನಾರೋಗ್ಯಕ್ಕೆ ಈಡಾಗಿದ್ದು ಯಾಕೆ ಗೊತ್ತಾ..?
Bengaluru , ಶನಿವಾರ, 4 ಮಾರ್ಚ್ 2017 (10:58 IST)
ಉಸಿರಾಟ ತೊಂದರೆ ಮತ್ತು ಶ್ವಾಸಕೋಶ ಸಮಸ್ಯೆಯಿಂದ ಮಾಜಿ ಸಿಎಂ ಕುಮಾರಸ್ವಾಮಿ ನಿನ್ನೆ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ತಜ್ಞ ಡಾ. ಸತೀಶ್ ಚಿಕಿತ್ಸೆ ಕೊಡುತ್ತಿದ್ದಾರೆ. ಕಳೆದೊಂದು ವಾರದಿಂದ ಚಿತ್ರದುರ್ಗ ಮತ್ತು ಮೈಸೂರು ಜಿಲ್ಲೆಯಲ್ಲಿ ಕುಮಾರಸ್ವಾಮಿ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭ ಕಾರ್ಯಕರ್ತರು ಸಿಡಿಸಿದ ಪಟಾಕಿಗಳಿಂದ ಬಂದ ಧೂಳು ದೇಹಕ್ಕೆ ಸೇರಿ ಉಸಿರಾಟದ ತೊಂದರೆ ಉಂಟಾಗಿತ್ತು.


ಈ ಕುರಿತು ಪ್ರತಿಕ್ರಿಯಿಸಿರುವ ಪತ್ನಿ ಅನಿತಾ ಕುಮಾರಸ್ವಾಮಿ, ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಯಾವುದೇ ಗಂಭೀರ ಸಮಸ್ಯೆ ಇಲ್ಲ. ಜ್ವರ ಮತ್ತು ಕೆಮ್ಮಿನಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಯಾವುದೇ ಹೃದಯ ಸಂಬಂದಿ ಸಮಸ್ಯೆ ಇಲ್ಲ. ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದೇವೇಳೆ, ಸಂಸದ ಪುಟ್ಟರಾಜು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಂಬ್ ಬಾಂಬ್.. ಎಂದು ಕಿರುಚಿದ್ದಕ್ಕೆ ಮಾಡೆಲ್ ಗೆ ಶಿಕ್ಷೆ!