Webdunia - Bharat's app for daily news and videos

Install App

ಜನಿವಾರ ಬಿಡಿ, ರೈಲ್ವೇ ಪರೀಕ್ಷೆಗೆ ಮಂಗಳಸೂತ್ರವೂ ಇರಬಾರದಂತೆ: ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಮಣಿದ ಸಚಿವ ಸೋಮಣ್ಣ

Krishnaveni K
ಸೋಮವಾರ, 28 ಏಪ್ರಿಲ್ 2025 (09:53 IST)
ನವದೆಹಲಿ: ಜನಿವಾರ ಬಿಡಿ, ರೈಲ್ವೇ ಪರೀಕ್ಷೆಗೆ ಮಂಗಳ ಸೂತ್ರವನ್ನೂ ಧರಿಸಿರಬಾರದು ಎಂಬ ರೈಲ್ವೇ ಇಲಾಖೆಯ ವಿವಾದಾತ್ಮಕ ತೀರ್ಪಿಗೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕತಪಡಿಸಿವೆ. ಇದರ ಬೆನ್ನಲ್ಲೇ ಈ ಅಂಶವನ್ನು ಕೈ ಬಿಡುವಂತೆ ರೈಲ್ವೇ ಖಾತೆ ರಾಜ್ಯ ಸಚಿವ ಸೋಮಣ್ಣ ಸೂಚನೆ ನೀಡಿದ್ದಾರೆ.

ರೈಲ್ವೇ ನೇಮಕಾತಿ ಮಂಡಳಿಯು ನರ್ಸಿಂಗ್ ಸೂಪರಿಟೆಂಡೆಂಟ್ ಪರೀಕ್ಷೆಗೆ ಹಾಜರಾಗಲು ಕೆಲವು ಷರತ್ತು ವಿಧಿಸಿತ್ತು. ಇದರಲ್ಲಿ ಮಹಿಳೆಯರು ಮಂಗಳಸೂತ್ರ ಧರಿಸಿರಬಾರದು, ಪುರುಷರು ಜನಿವಾರ ಧರಿಸಿರಬಾರದು ಎಂಬ ಷರತ್ತೂ ಇತ್ತು.

ಇದಕ್ಕೆ ಹಿಂದೂ ಸಂಘಟನೆಗಳಿಂದ ಭಾರೀ ಆಕ್ರೋಶ  ವ್ಯಕ್ತವಾಗಿತ್ತು. ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳ ಸೂತ್ರವನ್ನು ಧರಿಸಿರಬಾರದು ಎಂದು ಹೇಳಲಾಗಿತ್ತು. ಹಿಂದೂ ಸಂಘಟನೆಗಳ ಆಕ್ರೋಶದ ಬೆನ್ನಲ್ಲೇ ಈ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ರೈಲ್ವೇ ಸಚಿವರಿಗೆ ಮಾಹಿತಿ ನೀಡಿದ್ದರು.

ಇದಕ್ಕೆ ಸ್ಪಂದಿಸಿರುವ ಸಚಿವ ಸೋಮಣ್ಣ ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸೂಚಕಗಳನ್ನು ತೆಗೆಸದಂತೆ ಸೂಚನೆ ನೀಡಿದ್ದಾರೆ. ಮೊನ್ನೆಯಷ್ಟೇ ರಾಜ್ಯದಲ್ಲಿ ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ಜನಿವಾರ ತೆಗೆಸಿದ ಪ್ರಕರಣ ಭಾರೀ ವಿವಾದಕ್ಕೀಡಾಗಿತ್ತು. ಇದರ ಬೆನ್ನಲ್ಲೇ ರೈಲ್ವೇ ಇಲಾಖೆ ವಿವಾದಾತ್ಮಕ ನಿರ್ಧಾರ ಮಾಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Faridabad shocker: ಗರ್ಲ್ ಫ್ರೆಂಡ್ ನ ಕೊಂದು ಬೆಡ್ ಬಾಕ್ಸ್ ನಲ್ಲಿ ಶವ ಬಚ್ಚಿಟ್ಟಿದ್ದ ಭೂಪ

Pehalgam: ಅಮಾಯಕರನ್ನು ಕೊಂದರೆ ಅಲ್ಲಾಹ್ ಕ್ಷಮಿಸಲ್ಲ: ನಾವು ದೇಶದ ಜೊತೆಗಿದ್ದೇವೆ ಎಂದು ಮುಸ್ಲಿಮರು

Karnataka Rains: ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ ಇಲ್ಲಿದೆ ಸಂಪೂರ್ಣ ವಿವರ

Mallikarjun Kharge: ನಾವೆಲ್ಲಾ ಇರ್ತೀವಿ, ಹೋಗ್ತೀವಿ ದೇಶದ ಭದ್ರತೆ ಎಲ್ಲಕ್ಕಿಂತ ಮುಖ್ಯ: ಮಲ್ಲಿಕಾರ್ಜುನ ಖರ್ಗೆ

Indian Navy: ನಾವು ರೆಡಿ ಎಂದು ಕ್ಷಿಪಿಣಿ ಹಾರಿಸಿ ಪಾಕಿಸ್ತಾನಕ್ಕೆ ಠಕ್ಕರ್ ಕೊಟ್ಟ ಭಾರತೀಯ ನೌಕಾ ಸೇನೆ

ಮುಂದಿನ ಸುದ್ದಿ
Show comments