ಈ ಕಾರಣಕ್ಕೆ ತುರ್ತು ಸೇವೆ ಹೊರತುಪಡಿಸಿ ನಾಳೆ ವೈದ್ಯಕೀಯ ಸೇವೆಗಳಿರಲ್ಲ,

Krishnaveni K
ಶುಕ್ರವಾರ, 16 ಆಗಸ್ಟ್ 2024 (11:04 IST)
ಕೋಲ್ಕತ್ತಾ: ನಾಳೆ ತುರ್ತು ವೈದ್ಯಕೀಯ ಸೇವೆಗಳನ್ನು ಹೊರತುಪಡಿಸಿದಂತೆ ಉಳಿದಂತೆ ಯಾವುದೇ ವೈದ್ಯಕೀಯ ಸೇವೆಗಳಿರುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ ಘೋಷಣೆ ಮಾಡಿದೆ.

ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಸಂಘ ನಾಳೆ ಮುಷ್ಕರ ನಡೆಸಲು ತೀರ್ಮಾನಿಸಿದೆ. ಹೀಗಾಗಿ ನಾಳೆ ದೇಶದಾದ್ಯಂತ ಆಸ್ಪತ್ರೆಗಳಲ್ಲಿ ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಯಾವುದೇ ಸೇವೆಗಳು ಲಭ್ಯವಿರುವುದಿಲ್ಲ ಎಂದಿದೆ.

ಹೀಗಾಗಿ ನಾಳೆ ಆಸ್ಪತ್ರೆಗೆ ತೆರಳುವ ಯೋಜನೆಯಿದ್ದರೆ ಈ ಸೂಚನೆ ಗಮನಿಸಿ. ಈಗಾಗಲೇ ದೇಶದಾದ್ಯಂತ ಘಟನೆಗೆ ಸಂಬಂಧಿಸಿದಂತೆ ವೈದ್ಯಕೀಯ ಕ್ಷೇತ್ರದವರು ಮಾತ್ರವಲ್ಲದೇ ಸಾರ್ವಜನಿಕರೂ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿದ್ದು ತನಿಖೆ ನಡೆಯುತ್ತಿದೆ.

ಆರ್ ಜಿ ಕರ್ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದಾಗ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಕ್ರೂರವಾಗಿ ಹತ್ಯೆ ನಡೆಸಲಾಗಿತ್ತು. ಆಕೆಯ ಮರಣೋತ್ತರ ಪರೀಕ್ಷೆ ವೇಳೆ ಗ್ಯಾಂಗ್ ರೇಪ್ ನಡೆದಿರಬಹುದಾದ ಅನುಮಾನ ಬಂದಿದೆ. ಈ ಪ್ರಕರಣದಲ್ಲಿ ಈಗ ಒಬ್ಬಾತನನ್ನು ಮಾತ್ರ ಬಂಧಿಸಲಾಗಿದೆ. ಇನ್ನೊಂದೆಡೆ ಕೆಲವು ಕಿಡಿಗೇಡಿಗಳ ಗುಂಪು ಆಸ್ಪತ್ರೆಗೆ ದಾಳಿ ನಡೆಸಿ ಸಾಕ್ಷ್ಯ ನಾಶ ಮಾಡಲು ಯತ್ನಿಸಿದೆ. ಹೀಗಾಗಿ ಈ ಪ್ರಕರಣದಲ್ಲಿ ಪ್ರಭಾವಿಗಳ ಕೈವಾಡದ ಶಂಕೆ ಶುರುವಾಗಿದೆ. ಇಂದು 12 ಗಂಟೆಗಳ ಕಾಲ ಬಂಗಾಲ ಬಂದ್ ಗೆ ಕರೆ ನೀಡಲಾಗಿದೆ. ನಾಳೆ ವೈದ್ಯರು ದೇಶದಾದ್ಯಂತ ಮುಷ್ಕರ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬಿಹಾರದಲ್ಲಿ ಎನ್ ಡಿಎ ಗೆಲುವಿನಿಂದ ಜನರಿಗೆ ಖುಷಿಯಾಗಿಲ್ಲ, ಮರು ಚುನಾವಣೆ ಮಾಡಿ: ರಾಬರ್ಟ್ ವಾದ್ರಾ

ಆರ್ ಎಸ್ಎಸ್ ಬಿಟ್ರೆ ಬೇರೆ ವಿಷ್ಯಗಳೇ ಇಲ್ವಾ: ಪ್ರಿಯಾಂಕ್ ಖರ್ಗೆ ನೆಟ್ಟಿಗರ ಪ್ರಶ್ನೆ

Karnataka Weather: ರಾಜ್ಯದಲ್ಲಿ ಈ ವಾರದ ಹವಾಮಾನದಲ್ಲಿ ಏನಿದೆ ಬದಲಾವಣೆ

ಮುಂದಿನ ಸುದ್ದಿ
Show comments