Webdunia - Bharat's app for daily news and videos

Install App

ಇನ್ಮುಂದೆ ಎನ್ಆರ್ಐಗಳಿಗೆ ಯಾವುದೇ ನಿರ್ಬಂಧ ಇಲ್ಲ!

Webdunia
ಸೋಮವಾರ, 4 ಜುಲೈ 2022 (12:46 IST)
ನವದೆಹಲಿ : ಇನ್ಮುಂದೆ ನಿರ್ಬಂಧ ಇಲ್ಲದೇ  ಅನಿವಾಸಿ ಭಾರತೀಯರು(ಎನ್ಆರ್ಐ) ವಾರ್ಷಿಕವಾಗಿ 10 ಲಕ್ಷ ರೂ. ಕಳುಹಿಸಬಹುದು.
 
ವಿದೇಶಿ ದೇಣಿಗೆ ನಿಯಂತ್ರಣ ಕಾಯಿದೆಯ ಕೆಲವು ನಿಯಮಗಳಿಗೆ ಕೇಂದ್ರ ಗೃಹ ಸಚಿವಾಲಯ ತಿದ್ದುಪಡಿಗಳನ್ನು ಮಾಡಿದೆ. ದೇಣಿಗೆ ಮೊತ್ತ ಹೆಚ್ಚಳ ಮತ್ತು ಸ್ವೀಕಾರದ ಮಾಹಿತಿ ಸಲ್ಲಿಸುವ ಅವಧಿಯನ್ನು ಹೆಚ್ಚಿಸಲಾಗಿದೆ.

ಈ ತಿದ್ದುಪಡಿಯಿಂದ ಸಂಬಂಧಿಕರಿಂದ ವಿದೇಶಿ ದೇಣಿಗೆ ಪಡೆಯುವ ವ್ಯಕ್ತಿಗಳು ಹಾಗೂ ಸಂಘ ಸಂಸ್ಥೆಗಳಿಗೆ ಅನುಕೂಲವಾಗಲಿದೆ.

ಕೇಂದ್ರ ಗೃಹ ಸಚಿವಾಲಯ ಶುಕ್ರವಾರವೇ ಗೆಜೆಟ್ ಅಧಿಸೂಚನೆ ಪ್ರಕಟಿಸಿ 2022ರ ವಿದೇಶಿ ದೇಣಿಗೆ ನಿಯಂತ್ರಣ ತಿದ್ದುಪಡಿ ನಿಯಮಗಳನ್ನು ಜಾರಿಗೆ ತಂದಿದೆ. 2011ರ ವಿದೇಶಿ ದೇಣಿಗೆ ನಿಯಂತ್ರಣ ನಿಯಮಗಳ ಪ್ರಕಾರ ‘1 ಲಕ್ಷ ರೂಪಾಯಿ‘ ಪದವನ್ನು ‘10 ಲಕ್ಷ ರೂಪಾಯಿ‘ ಮತ್ತು ‘30 ದಿನಗಳು’ ಪದವನ್ನು ‘3 ತಿಂಗಳು‘ ಎಂದು ತಿದ್ದುಪಡಿ ಮಾಡಲಾಗಿದೆ.

ಈ ಮೊದಲು ಹಣಕಾಸು ವರ್ಷವೊಂದರಲ್ಲಿ ಯಾವುದೇ ವ್ಯಕ್ತಿಯು 1 ಲಕ್ಷ ರೂ. ಅಥವಾ ಅದಕ್ಕಿಂತಲೂ ಹೆಚ್ಚಿನ ಮೊತ್ತದ ವಿದೇಶಿ ದೇಣಿಗೆಯನ್ನು ಸ್ವೀಕರಿಸಿದ್ದಲ್ಲಿ ದೇಣಿಗೆ ಪಡೆದ ದಿನದಿಂದ 30 ದಿನದ ಒಳಗೆ ಕೇಂದ್ರ ಸರಕಾರಕ್ಕೆ ಪೂರ್ಣ ವಿವರಗಳನ್ನು ಸಲ್ಲಿಸುವುದು ಕಡ್ಡಾಯವಾಗಿತ್ತು.

ತಿದ್ದುಪಡಿಯಾದ ಬಳಿಕ ವಿದೇಶದಲ್ಲಿರುವ ಸಂಬಂಧಿಕರು ತಮ್ಮ ಕುಟುಂಬಸ್ಥರು ಅಥವಾ ಬೇರೆಯವರಿಗೆ ಕೇಂದ್ರದ ಗಮನಕ್ಕೆ ತರದೇ ಗರಿಷ್ಟ 10 ಲಕ್ಷ ರೂ.ವರೆಗೆ ದೇಣಿಗೆ ಕಳುಹಿಸಲು ಅನುಮತಿ ನೀಡಲಾಗಿದೆ. 10 ಲಕ್ಷ ರೂ.ಗಿಂತ ಹೆಚ್ಚಿನ ದೇಣಿಗೆ ಕಳಹಿಸಿದ್ದಲ್ಲಿ ದೇಣಿಗೆ ಸ್ವೀಕಾರದ ದಿನಾಂಕದಿಂದ 30 ದಿನಗಳ ಬದಲಿಗೆ 3 ತಿಂಗಳೊಳಗಾಗಿ ಕೇಂದ್ರಕ್ಕೆ ಮಾಹಿತಿಯನ್ನು ಸಲ್ಲಿಸಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments