Webdunia - Bharat's app for daily news and videos

Install App

ನೋಟು ಮದ್ರಣ ಇಲ್ಲ: ಸಚಿವೆ ನಿರ್ಮಲಾ ಸ್ಪಷ್ಟನೆ!

Webdunia
ಮಂಗಳವಾರ, 27 ಜುಲೈ 2021 (08:33 IST)
ನವದೆಹಲಿ(ಜು,27): ಕೋವಿಡ್-19ನಿಂದಾಗಿ ದೇಶ ಎದುರಿಸುತ್ತಿರುವ ಸಮಸ್ಯೆ ನಿರ್ವಹಣೆಗಾಗಿ ನೋಟು ಮುದ್ರಿಸುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸಂಸತ್ತಿಗೆ ಮಾಹಿತಿ ನೀಡಿದೆ.

* ಕೋವಿಡ್-19ನಿಂದಾಗಿ ದೇಶ ಎದುರಿಸುತ್ತಿರುವ ಸಮಸ್ಯೆ
* ಕೋವಿಡ್ ಸಂಕಷ್ಟ ನಿರ್ವಹಣೆಗೆ ನೋಟು ಮದ್ರಣ ಇಲ್ಲ
* ಸಂಸತ್ತಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸ್ಪಷ್ಟನೆ

ಕೋವಿಡ್ನಿಂದಾಗಿ ಎದುರಾಗಿರುವ ಸಂಕಷ್ಟಗಳ ನಿವಾರಣೆ ಮತ್ತು ಉದ್ಯೋಗಳನ್ನು ಉಳಿಸುವ ಸಲುವಾಗಿ ಹೆಚ್ಚೆಚ್ಚು ನೋಟುಗಳನ್ನು ಮುದ್ರಿಸಿ ಆರ್ಥಿಕತೆಗೆ ಬಿಡುಗಡೆ ಮಾಡುವ ಬಗ್ಗೆ ಹಲವು ಆರ್ಥಿಕ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದರು. ಅದರ ಬೆನ್ನಲ್ಲೇ ಇಂಥ ಪ್ರಸ್ತಾಪ ಇದೆಯೇ ಎಂದು ಸರ್ಕಾರಕ್ಕೆ ಸಂಸತ್ತಿನಲ್ಲಿ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ‘ಇಲ್ಲ’ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರಿಸಿದ್ದಾರೆ.
‘2020-21ನೇ ಸಾಲಿನಲ್ಲಿ ದೇಶದ ಜಿಡಿಪಿ ಶೇ.7.3ರಷ್ಟುಕುಸಿತ ಕಂಡಿದೆ. ಇದು ಕೋವಿಡ್ ಮತ್ತು ಅದನ್ನು ನಿರ್ವಹಿಸಲು ಜಾರಿಗೊಳಿಸಲಾದ ಕಠಿಣ ಕ್ರಮಗಳು ಆರ್ಥಿಕತೆ ಮೇಲೆ ಬೀರಿರುವ ಅಳಿಸಲಾಗದ ಪರಿಣಾಮಗಳನ್ನು ತೋರಿಸುತ್ತಿದೆ. ಆದರೆ ದೇಶದ ಆರ್ಥಿಕತೆಯ ಮೂಲಬೇರುಗಳು ಸುಭದ್ರವಾಗಿರುವ ಕಾರಣ, ನಾವು ನಿಧಾನವಾಗಿ ಚೇತರಿಕೆಯ ಹಂತದತ್ತ ಸಾಗುತ್ತಿದ್ದೇವೆ. ಜೊತೆಗೆ ಆತ್ಮನಿರ್ಭರ ಭಾರತ ಯೋಜನೆಯು ಆರ್ಥಿಕತೆಯನ್ನು ಮತ್ತೆ ಸರಿದಾರಿಗೆ ತರುತ್ತಿದೆ’ ಎಂದು ಹೇಳಿದ್ದಾರೆ.
ಜೊತೆಗೆ ದೇಶದ ಆರ್ಥಿಕತೆಗೆ ನೆರವಾಗಲು ಬಜೆಟ್ನಲ್ಲಿ ಹಲವು ಕ್ರಮಗಳನ್ನು ಘೋಷಿಸಲಾಗಿದೆ. ಜೊತೆಗೆ ಇತರೆ ಹಲವು ಪ್ಯಾಕೇಜ್ಗಳ ಮೂಲಕ ಪರಿಸ್ಥಿತಿಯನ್ನು ಎದುರಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments