Webdunia - Bharat's app for daily news and videos

Install App

ನೋಟು ಮದ್ರಣ ಇಲ್ಲ: ಸಚಿವೆ ನಿರ್ಮಲಾ ಸ್ಪಷ್ಟನೆ!

Webdunia
ಮಂಗಳವಾರ, 27 ಜುಲೈ 2021 (08:33 IST)
ನವದೆಹಲಿ(ಜು,27): ಕೋವಿಡ್-19ನಿಂದಾಗಿ ದೇಶ ಎದುರಿಸುತ್ತಿರುವ ಸಮಸ್ಯೆ ನಿರ್ವಹಣೆಗಾಗಿ ನೋಟು ಮುದ್ರಿಸುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸಂಸತ್ತಿಗೆ ಮಾಹಿತಿ ನೀಡಿದೆ.


* ಕೋವಿಡ್-19ನಿಂದಾಗಿ ದೇಶ ಎದುರಿಸುತ್ತಿರುವ ಸಮಸ್ಯೆ
* ಕೋವಿಡ್ ಸಂಕಷ್ಟ ನಿರ್ವಹಣೆಗೆ ನೋಟು ಮದ್ರಣ ಇಲ್ಲ
* ಸಂಸತ್ತಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸ್ಪಷ್ಟನೆ

ಕೋವಿಡ್ನಿಂದಾಗಿ ಎದುರಾಗಿರುವ ಸಂಕಷ್ಟಗಳ ನಿವಾರಣೆ ಮತ್ತು ಉದ್ಯೋಗಳನ್ನು ಉಳಿಸುವ ಸಲುವಾಗಿ ಹೆಚ್ಚೆಚ್ಚು ನೋಟುಗಳನ್ನು ಮುದ್ರಿಸಿ ಆರ್ಥಿಕತೆಗೆ ಬಿಡುಗಡೆ ಮಾಡುವ ಬಗ್ಗೆ ಹಲವು ಆರ್ಥಿಕ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದರು. ಅದರ ಬೆನ್ನಲ್ಲೇ ಇಂಥ ಪ್ರಸ್ತಾಪ ಇದೆಯೇ ಎಂದು ಸರ್ಕಾರಕ್ಕೆ ಸಂಸತ್ತಿನಲ್ಲಿ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ‘ಇಲ್ಲ’ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರಿಸಿದ್ದಾರೆ.
‘2020-21ನೇ ಸಾಲಿನಲ್ಲಿ ದೇಶದ ಜಿಡಿಪಿ ಶೇ.7.3ರಷ್ಟುಕುಸಿತ ಕಂಡಿದೆ. ಇದು ಕೋವಿಡ್ ಮತ್ತು ಅದನ್ನು ನಿರ್ವಹಿಸಲು ಜಾರಿಗೊಳಿಸಲಾದ ಕಠಿಣ ಕ್ರಮಗಳು ಆರ್ಥಿಕತೆ ಮೇಲೆ ಬೀರಿರುವ ಅಳಿಸಲಾಗದ ಪರಿಣಾಮಗಳನ್ನು ತೋರಿಸುತ್ತಿದೆ. ಆದರೆ ದೇಶದ ಆರ್ಥಿಕತೆಯ ಮೂಲಬೇರುಗಳು ಸುಭದ್ರವಾಗಿರುವ ಕಾರಣ, ನಾವು ನಿಧಾನವಾಗಿ ಚೇತರಿಕೆಯ ಹಂತದತ್ತ ಸಾಗುತ್ತಿದ್ದೇವೆ. ಜೊತೆಗೆ ಆತ್ಮನಿರ್ಭರ ಭಾರತ ಯೋಜನೆಯು ಆರ್ಥಿಕತೆಯನ್ನು ಮತ್ತೆ ಸರಿದಾರಿಗೆ ತರುತ್ತಿದೆ’ ಎಂದು ಹೇಳಿದ್ದಾರೆ.
ಜೊತೆಗೆ ದೇಶದ ಆರ್ಥಿಕತೆಗೆ ನೆರವಾಗಲು ಬಜೆಟ್ನಲ್ಲಿ ಹಲವು ಕ್ರಮಗಳನ್ನು ಘೋಷಿಸಲಾಗಿದೆ. ಜೊತೆಗೆ ಇತರೆ ಹಲವು ಪ್ಯಾಕೇಜ್ಗಳ ಮೂಲಕ ಪರಿಸ್ಥಿತಿಯನ್ನು ಎದುರಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments