Webdunia - Bharat's app for daily news and videos

Install App

ಪಿಒಕೆಯಲ್ಲಿ ಸೀಮಿತ ದಾಳಿ ನಡೆದಿಲ್ಲ, ಮಣ್ಣಿನಗಟ್ಟಿಯೂ ಇಲ್ಲ: ಪಾಕ್ ರಾಯಭಾರಿ

Webdunia
ಗುರುವಾರ, 13 ಅಕ್ಟೋಬರ್ 2016 (19:17 IST)
ಪಾಕಿಸ್ತಾನ ಆಕ್ರಮಿತ ಕಾಶ್ಮಿರದಲ್ಲಿ ಸೆಪ್ಟೆಂಬರ್ 29 ರಂದು ಭಾರತೀಯ ಸೇನೆಯ ಸೀಮಿತ ದಾಳಿ ನಡೆಸಿರುವುದನ್ನು ಮತ್ತೊಮ್ಮೆ ತಳ್ಳಿಹಾಕಿದ ನವದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರಿ ಅಬ್ದುಲ್ ಬಾಸಿತ್, ಇದೊಂದು ಗಡಿಯಂಚಿನ ಚಕಮಕಿಯಷ್ಟೆ ಎಂದು ಲೇವಡಿ ಮಾಡಿದ್ದಾರೆ. 
 
ಪಾಕಿಸ್ತಾನದ ಗಡಿಯೊಳಗೆ ಸೀಮಿತ ದಾಳಿ ನಡೆದಿಲ್ಲ. ಒಂದು ವೇಳೆ, ಸೀಮಿತ ದಾಳಿ ನಡೆದಿದ್ದರೆ ಪಾಕಿಸ್ತಾನ ಸೇನೆ ತಕ್ಕ ಉತ್ತರ ನೀಡುತ್ತಿತ್ತು. ಭಾರತೀಯ ಸೇನೆ ಗಡಿಯಂಚಿನಲ್ಲಿ ಅಲ್ಪಮಟ್ಟಿನ ಗುಂಡಿನ ಚಕಮಕಿ ಮಾತ್ರ ನಡೆಸಿದೆ ಎಂದು ತಿರುಗೇಟು ನೀಡಿದ್ದಾರೆ.
 
ಸೀಮಿತ ದಾಳಿಯ ಬಗ್ಗೆ ಪಾಕಿಸ್ತಾನಕ್ಕೆ ಯಾವ ರೀತಿಯ ಸಂದೇಶ ಹೋಗಿದೆ ಎನ್ನುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸೀಮಿತ ದಾಳಿಯೇ ನಡೆದಿಲ್ಲ ಎಂದ ಮೇಲೆ ಪಾಕಿಸ್ತಾನಕ್ಕೆ ಯಾವುದೇ ಸಂದೇಶ ಹೋಗಿಲ್ಲ ಎಂದರ್ಥ ಅಲ್ಲವೇ ಎಂದು ಪ್ರಶ್ನಿಸಿದರು.
 
ಪಾಕಿಸ್ತಾನದ ಅನೇಕ ಪತ್ರಿಕೆಗಳು ಸೀಮಿತ ದಾಳಿಯ ಬಗ್ಗೆ ಲೇಖನಗಳನ್ನು ಬರೆದಿವೆ. ಆದರೆ, ಪತ್ರಿಕೆಗಳಲ್ಲಿ ಪ್ರಕಟವಾದ ವರದಿಗಳ ಬಗ್ಗೆ ನಾನು ಹೇಳಿಕೆ ನೀಡಲು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ.
 
ಉತ್ತರ ಕಾಶ್ಮಿರದ ಉರಿ ಸೇನಾ ಕೇಂದ್ರದ ಮೇಲೆ ನಡೆದ ಉಗ್ರರ ದಾಳಿಯ ನಂತರ ಪಾಕಿಸ್ತಾನ ಅಂತಾರಾಷ್ಟ್ರೀಯ ಸಮುದಾಯದಲ್ಲಿ ಏಕಾಂಗಿಯಾಗಿದೆಯೇ ಎನ್ನುವ ಭಾವನೆಯಿದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಪಾಕಿಸ್ತಾನ ಎಲ್ಲಾ ದೇಶಗಳಿಗಿಂತ ಭಯೋತ್ಪಾದನೆಯ ನೋವು ಅನುಭವಿಸಿದೆ ಎಂದು ಪಾಕಿಸ್ತಾನದ ರಾಯಭಾರಿ ಅಬ್ದುಲ್ ಬಾಸಿತ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments