Select Your Language

Notifications

webdunia
webdunia
webdunia
webdunia

ಎಂಜಿನಿಯರ್ಗಳಿಗೆ ಅಭಿನಂದಿಸಲು ಶಬ್ದಗಳೇ ಸಾಲುತ್ತಿಲ್ಲ: ಮೋದಿ

ಎಂಜಿನಿಯರ್ಗಳಿಗೆ ಅಭಿನಂದಿಸಲು ಶಬ್ದಗಳೇ ಸಾಲುತ್ತಿಲ್ಲ: ಮೋದಿ
ನವದೆಹಲಿ , ಬುಧವಾರ, 15 ಸೆಪ್ಟಂಬರ್ 2021 (13:39 IST)
ನವದೆಹಲಿ : 'ನಮ್ಮ ಜಗತ್ತನ್ನು ಇನ್ನಷ್ಟು ಉತ್ತಮ ಮತ್ತು ತಾಂತ್ರಿಕವಾಗಿ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಎಂಜಿನಿಯರ್ಗಳಿಗೆ ಅಭಿನಂದನೆ ಸಲ್ಲಿಸಲು ಶಬ್ಧಗಳೇ ಸಾಕಾಗುತ್ತಿಲ್ಲ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದರು.

ಶ್ರೇಷ್ಠ ಸಿವಿಲ್ ಎಂಜಿನಿಯರ್ ಮತ್ತು ಮೈಸೂರಿನ ದಿವಾನರಾಗಿದ್ದ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ 15ರಂದು ಎಂಜಿನಿರ್ಗಳ ದಿನವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ಅವರು ಶುಭಾಶಯ ಕೋರುವ ವೇಳೆ ಈ ವಿಷಯ ತಿಳಿಸಿದ್ದಾರೆ.
'ನಿಮಗೆ ಎಂಜಿನಿಯರ್ಗಳ ದಿನದ ಶುಭಾಶಯಗಳು. ನಮ್ಮ ಜಗತ್ತನ್ನು ತಾಂತ್ರಿಕವಾಗಿ ಮುನ್ನಡೆಸುವಲ್ಲಿ ನೀವು ಪ್ರಮುಖ ಪಾತ್ರವಹಿಸಿದ್ದೀರಿ. ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರ ಸಾಧನೆಗಳನ್ನು ಸದಾ ಸ್ಮರಿಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಶೀಘ್ರದಲ್ಲೇ ಆನ್ ಲೈನ್ ಡೆಲಿವರಿ ಸೇವೆಗಳ ಮೇಲೆ GST