Webdunia - Bharat's app for daily news and videos

Install App

ನಾಲ್ಕು ವರ್ಷದ ಬಳಿಕ ಸಿಕ್ತು ಸೆರೆವಾಸದಿಂದ ಮುಕ್ತಿ

Webdunia
ಮಂಗಳವಾರ, 17 ಅಕ್ಟೋಬರ್ 2017 (07:47 IST)
ನವದೆಹಲಿ: ಜೋಡಿ ಕೊಲೆ ಆರೋಪ ಹೊತ್ತು ನಾಲ್ಕು ವರ್ಷದಿಂದ ಜೈಲು ಪಾಲಾಗಿದ್ದ ಆರುಷಿ ಪೋಷಕರಿಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ.

14 ವರ್ಷದ ಮಗಳು ಆರುಷಿ ತಲ್ವಾರ್ ಹಾಗೂ ಮನೆಕೆಲಸದ ಹೇಮರಾಜ್ ಕೊಲೆ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ಕಳೆದ ವಾರ ಆರುಷಿ ಪೋಷಕರಾದ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ರನ್ನು ಹೈಕೋರ್ಟ್ ಖುಲಾಸೆಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಗಾಜಿಯಾಬಾದ್ ನ ದಾಸ್ನಾ ಜೈಲಿನಿಂದ ನಿನ್ನೆ(ಅ.16) ಬಿಡುಗಡೆಯಾಗಿದ್ದಾರೆ.

ನಾಲ್ಕು ವರ್ಷದ ಬಳಿಕ ಜೈಲುವಾಸದಿಂದ ಹೊರಬಂದ ತಲ್ವಾರ್ ದಂಪತಿಯನ್ನು ರಾಜೇಶ್ ಸಹೋದರ ದಿನೇಶ್ ತಲ್ವಾರ್, ವಕೀಲರಾದ ಮನೋಜ್ ಸಿಸೋಡಿಯಾ ಹಾಗೂ ತನ್ವೀರ್ ಅಹ್ಮದ್ ಮೀರ್ ಸಂತಸದಿಂದ ಬರಮಾಡಿಕೊಂಡರು. ಇದೇವೇಳೆ ಜೈಲಿನಿಂದ ತಮ್ಮ ಕಕ್ಷಿದಾರರು ಬಿಡುಗಡೆ ಆಗುತ್ತಿರುವುದಕ್ಕೆ ತುಂಬಾ ಖುಷಿಯಾಗಿದೆ ಎಂದು ತನ್ವೀರ್ ಹೇಳಿದ್ದಾರೆ.

ಇನ್ನು ದಂಪತಿ ವೃತ್ತಿಯಲ್ಲಿ ದಂತ ವೈದ್ಯರು. ಜೈಲಿನಲ್ಲಿರುವಷ್ಟು ದಿನ ಅಲ್ಲಿದ್ದ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಬಿಡುಗಡೆಯಾದ ಬಳಿಕವೂ ತಲ್ವಾರ್ ದಂಪತಿ, 15 ದಿನಕ್ಕೊಮ್ಮೆ ಜೈಲಿಗೆ ತೆರಳಿ ಅಲ್ಲಿ ಚಿಕಿತ್ಸೆ ನೀಡುವುದಾಗಿ ದಂಪತಿ ಖುದ್ದು ಹೇಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments