Webdunia - Bharat's app for daily news and videos

Install App

ಮೀಸಲಾತಿ ನಿರ್ಧರಿಸಲು ರಾಜಕೀಯೇತರ ಸಮಿತಿ ರಚಿಸಬೇಕು: ಮೋಹನ್ ಭಾಗವತ್

Webdunia
ಮಂಗಳವಾರ, 23 ಫೆಬ್ರವರಿ 2016 (15:50 IST)
ಹರಿಯಾಣಾದಲ್ಲಿ ಜಾಟ್ ಸಮುದಾಯದ ಮೀಸಲಾತಿ ಹೋರಾಟ ಸಮಿತಿ ಪ್ರತಿಭಟನೆ ಮುಂದುವರಿಸಿರುವಂತೆಯೇ, ಮೀಸಲಾತಿ ಅರ್ಹತೆ ನಿಗದಿಪಡಿಸಲು ರಾಜಕೀಯೇತರ ಸಮಿತಿ ರಚಿಸಬೇಕು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಸಲಹೆ ನೀಡಿದ್ದಾರೆ.
 
ಅನೇಕ ಸಮುದಾಯಗಳ ಜನತೆ ಮೀಸಲಾತಿಗಾಗಿ ಒತ್ತಾಯಿಸುತ್ತಿರುವುದರಿಂದ, ಮೀಸಲಾತಿಗೆ ಅರ್ಹರು ಯಾರು ಎನ್ನುವ ಬಗ್ಗೆ ನಿರ್ಧರಿಸಲು ರಾಜಕೀಯೇತರ ಸಮಿತಿ ರಚಿಸುವುದು ಸೂಕ್ತ. ಇಲ್ಲವಾದಲ್ಲಿ ಪಟ್ಟಬದ್ರ ಹಿತಾಸಕ್ತಿಗಳ ಕೈ ಮೇಲಾಗುತ್ತದೆ ಎಂದು ತಿಳಿಸಿದ್ದಾರೆ.
 
ಮೇಲ್ಜಾತಿಯಲ್ಲಿ ಜನಿಸಿದ್ದಾನೆ ಎನ್ನುವ ಕೇವಲ ಒಂದೇ ಒಂದು ಕಾರಣಕ್ಕೆ ಅಂತಹ ವ್ಯಕ್ತಿಗೆ ಮೀಸಲಾತಿ ನಿರಾಕರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
 
ಯಾವ ಸಮುದಾಯವನ್ನು ಮುಂದೆ ತರಲು ಮೀಸಲಾತಿ ನೀಡಬೇಕು. ಎಷ್ಟು ವರ್ಷಗಳವರೆಗೆ ಮೀಸಲಾತಿ ನೀಡಬೇಕು ಎನ್ನುವ ನಿರ್ಧಾರದ ಅಧಿಕಾರ ಸಮಿತಿಗೆ ನೀಡಬೇಕು ಎಂದು ಹೇಳಿದ್ದಾರೆ. 
 
ಮೀಸಲಾತಿ ವಿವಾದಕ್ಕೆ ತಮ್ಮ ಪರಿಹಾರವೇನು ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ದೇಶದ ಪ್ರತಿಯೊಬ್ಬ ನಾಗರಿಕನಿಗೆ ಸಮಾನ ಅವಕಾಶ ದೊರೆಯಬೇಕು ಎನ್ನುವುದು ನನ್ನ ನಿಲುವಾಗಿದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಸ್ಪಷ್ಟಪಡಿಸಿದರು.
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments