Webdunia - Bharat's app for daily news and videos

Install App

ಉಷ್ಣಗಾಳಿ ಹೊಡೆತಕ್ಕೆ ತತ್ತರಿಸಿದ ಉತ್ತರ ಭಾರತ

Webdunia
ಸೋಮವಾರ, 16 ಮೇ 2022 (09:30 IST)
ನವದೆಹಲಿ: ಕಳೆದ 2 ತಿಂಗಳನಿಂದ ದೇಶದ ಉತ್ತರದ ಹಲವು ರಾಜ್ಯಗಳನ್ನು ಬಹುವಾಗಿ ಕಾಡುತ್ತಿರುವ ಉಷ್ಣಮಾರುತ ಭಾನುವಾರ ವಿಪರೀತಕ್ಕೆ ಹೋಗಿದೆ. ರಾಜಧಾನಿ ನವದೆಹಲಿಯ ಹಲವು ಭಾಗಗಳಲ್ಲಿ ಭಾನುವಾರ 49.2 ಡಿ.ಸೆ ಉಷ್ಣಾಂಶ ದಾಖಲಾಗಿದೆ. ಇದು ಇದುವರೆಗೆ ದೆಹಲಿಯಲ್ಲಿ ದಾಖಲಾದ ಗರಿಷ್ಠ ಉಷ್ಣಾಂಶವಾಗಿದೆ.
 
ದೆಹಲಿ ಮಾತ್ರವಲ್ಲದೇ ಉತ್ತರಪ್ರದೇಶ, ಪಂಜಾಬ್‌, ಹರ್ಯಾಣ, ರಾಜಸ್ಥಾನ, ಮಧ್ಯಪ್ರದೇಶದ ಹಲವು ನಗರಗಳಲ್ಲೂ 45-48 ಡಿ.ಸೆನಷ್ಟುಉಷ್ಣಾಂಶ ದಾಖಲಾಗಿದ್ದು ಸಾಮಾನ್ಯ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ.
 
ಭಾರೀ ಉಷ್ಣಾಂಶ ಮತ್ತು ಬಿಸಿಗಾಳಿಯ ಪರಿಣಾಮ ಹಲವು ನಗರಗಳಲ್ಲಿ ಜನರು ಮನೆಯಿಂದ ಹೊರಬರಲು ಹಿಂದೆ ಮುಂದೆ ನೋಡುವಂತಾಯಿತು. ಜನ ಸಂಚಾರ ಕೂಡಾ ಸಾಮಾನ್ಯಕ್ಕಿಂತ ಕಡಿಮೆಯಾಗಿತ್ತು.
ರಾಜಧಾನಿ ನವದೆಹಲಿಯ ಮುಂಗೇಶ್‌ಪುರದಲ್ಲಿ ಗರಿಷ್ಠ 49.2 ಡಿ.ಸೆ. ಉಷ್ಣಾಂಶ ದಾಖಲಾಗಿದೆ. ಉಳಿದಂತೆ ವಾಯುವ್ಯ ದೆಹಲಿಯಲ್ಲಿ 49.1 ಡಿ.ಸೆ., ಸ್ಪೋಟ್ಸ್‌ರ್‍ ಕಾಂಪ್ಲೆಕ್ಸ್‌ ಪ್ರದೇಶದಲ್ಲಿ 48.4 ಡಿ.ಸೆ., ಜಫರ್‌ಪುರದಲ್ಲಿ 47.5 ಡಿ.ಸೆ., ಪೀತಂಪುರದಲ್ಲಿ 47.2 ಡಿ.ಸೆ.ಉಷ್ಣಾಂಶ ದಾಖಲಾಗಿದೆ.
 
ಉಳಿದಂತೆ ಹರ್ಯಾಣದ ಗುರುಗ್ರಾಮದಲ್ಲಿ 48.1 ಡಿ.ಸೆ., ಪಂಜಾಬ್‌ನ ಮುಕ್ತಸರ್‌ದಲ್ಲಿ 47.4 ಡಿ.ಸೆ., ಸಿರ್ಸಾದಲ್ಲಿ 47.2 ಡಿ.ಸೆ., ರೋಹ್ಟಕ್‌ನಲ್ಲಿ 46.7 ಡಿ.ಸೆ.,ಭಠಿಂಡಾದಲ್ಲಿ 46.8 ಡಿ.ಸೆ.,ದಾಖಲಾಗಿದೆ.
ಇನ್ನು ರಾಜಸ್ತಾನದ ಚುರುವಿನಲ್ಲಿ 47.9 ಡಿ.ಸೆ., ಪಿಲಾನಿಯಲ್ಲಿ 47.7 ಡಿ.ಸೆ., ಶ್ರೀಗಂಗಾನಗರದಲ್ಲಿ 47.6 ಡಿ.ಸೆ. ದಾಖಲಾಗಿದೆ. ಮಧ್ಯಪ್ರದೇಶದ ನೌಗಾಂವ್‌, ಖುಜುರಾಹೋ ತಲಾ 47 ಡಿ.ಸೆ. ದಾಖಲಾಗಿದೆ.
 
ಸೋಮವಾರದ ಬಳಿಕ ದೆಹಲಿ, ಹರ್ಯಾಣ, ಪಂಜಾಬ್‌ ಸೇರಿ ಹಲವು ರಾಜ್ಯಗಳಲ್ಲಿ ಉಷ್ಣಾಂಶ ಇಳಿ ಮುಖವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿರುವ ಹಿನ್ನೆಲೆಯಲ್ಲಿ ಜನರು ಸ್ವಲ್ಪ ಸಮಾಧಾನ ಪಡುವಂತಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ರಾಜೀನಾಮೆ ಕೊಟ್ಟು ಕ್ಷಮೆ ಕೇಳಲಿ: ಗೋವಿಂದ ಕಾರಜೋಳ

Bengaluru: ಅನೈತಿಕ ಸಂಬಂಧ ಶಂಕೆ, ಪತ್ನಿಯ ತಲೆ ಕತ್ತರಿಸಿ, ಠಾಣೆಗೆ ಕೊಂಡೊಯ್ದ ಪತಿ

Chenab Railway Bridge: ವಿಶ್ವದ ಅತೀ ಎತ್ತರದ ಸೇತುವೆಯ ನಿಮಾರ್ಣದ ಹಿಂದಿದೆ ಬೆಂಗಳೂರು ಟೆಕ್ಕಿಯ ಕೈಚಳಕ

ಪೈಲಟ್ ಮಾಡಿದ ಡ್ರಾಮಾಕ್ಕೆ ವಿಮಾನ ಹಾರದೆ 1 ಗಂಟೆ ಕಾದು ಸುಸ್ತಾದ ಡಿಸಿಎಂ ಏಕನಾಥ ಶಿಂದೆ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments