Webdunia - Bharat's app for daily news and videos

Install App

ಟಿಟಿಡಿ ಸಿಇಓ ಆಗಿ ಉತ್ತರಭಾರತದ ಅಧಿಕಾರಿ ನೇಮಕ: ಪವನ್ ಕಲ್ಯಾಣ್, ಶಾರದಾ ಪೀಠದ ಶ್ರೀಗಳ ಅಸಮಾಧಾನ

Webdunia
ಮಂಗಳವಾರ, 9 ಮೇ 2017 (07:36 IST)
ತಿರುಪತಿಯ ತಿರುಮಲ ತಿರುಪತಿ ದೇವಸ್ಥಾನಂನ ಸಿಇಓ ಆಗಿ ಉತ್ತರಭಾರತದ ಐಎಎಸ್ ಆಧಿಕಾರಿಯ ನೇಮಕ ವಿಚಾರ ಭಾರೀ ವಿವಾದಕ್ಕೆ ಎಡೆಮಾಡಿದೆ. ಪಂಜಾಬ್ ಮೂಲದ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಸಿಂಘಲ್ ಅವರನ್ನ ಸಿಇಓ ಆಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶದ ವಿರುದ್ಧ ಸ್ವಾಮೀಜಿಗಳು ಮತ್ತು ಭಕ್ತರು ಸಿಡಿದೆದ್ದಿದ್ದಾರೆ.
 

ಟಿಟಿಡಿಯ ಸಿಇಓ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ಕೆ.ಎಸ್. ಜವಾಹರ್ ರೆಡ್ಡಿ ಹೆಸರು ಪ್ರಮುಖವಾಗಿ ಕೇಳಿಬರುತ್ತಿತ್ತು. ಅವರು ವೈಯಕ್ತಿಕ ರಜೆಯಲ್ಲಿರುವ ಕಾರಣವೊಡ್ಡಿ ಉತ್ತರ ಭಾರತದ ಐಎಎಸ್ ಅಧಿಕಾರಿಯನ್ನ ನೇಮಕ ಮಾಡಲಾಗಿದೆ ಎಂಬುದು ಆರೋಪ. ಇತಿಹಾಸದಲ್ಲೆಂದೂ ಆಂಧ್ರ ಮೂಲದ ಅಧಿಕಾರಿಯನ್ನ ಬಿಟ್ಟು ಬೇರೆಯವರನ್ನ ಸಿಇಓ ಪೋಸ್ಟ್`ಗೆ ನೇಮಕ ಮಾಡಿರಲಿಲ್ಲ.

ವಿಶಾಖಪಟ್ಟಣದ ಶಾರದಾ ಪೀಠದ ಸ್ವರೂಪಾನಂದ ಸರಸ್ವತಿ ಶ್ರೀಗಳು ಸಹ ಈ ಆಯ್ಕೆಯನ್ನ ವಿರೋಧಿಸಿದ್ದು, ಉತ್ತರಭಾರತ ಮೂಲದ ವ್ಯಕ್ತಿಗೆ ನಮ್ಮ ಆಗಮ ಶಾಸ್ತ್ರದ ಬಗ್ಗೆ ಏನು ತಿಳಿದಿರುತ್ತದೆ ಎಂದು ಪ್ರಶ್ನಿಸಿದ್ದಾರೆ. ಸರ್ಕಾರ ಕೂಡಲೇ ನಿರ್ಧಾರ ಹಿಂಪಡೆಯದಿದ್ದರೆ ಕೋರ್ಟ್ ಮೊರೆ ಹೋಗಿಉವುದಾಗಿ ಎಚ್ಚರಿಸಿದ್ದಾರೆ.

ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಇದನ್ನ ವಿರೋಧಿಸಿದ್ದು, ಉತ್ತರಭಾರತದ ಐಎಎಸ್ ಅಧಿಕಾರಿ ನೇಮಕಕ್ಕೆ  ನನ್ನ ವಿರೋಧವಿಲ್ಲ. ಉತ್ತರ ಭಾರತದ ದೇವಸ್ಥಾನಗಳಿಗೆ ನಮ್ಮ ದಕ್ಷಿಣದ ಅಧಿಕಾರಿಗಳನ್ನ ಸಿಇಓ ಆಗಿ ನೇಮಿಸುತ್ತಾರಾ..? ಎಂದು ಪ್ರಶ್ನಿಸಿದ್ದಾರೆ. ಕೂಡಲೇ ಆಂಧ್ರ ಸರ್ಕಾರ ನಿರ್ಧಾರ ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments